ಭಯೋತ್ಪಾದಕರ ಪೈಶಾಚಿಕ ಕೃತ್ಯ: ಶಾಸಕ ನಾಯ್ಕ್ ಖಂಡನೆ

ಭಯೋತ್ಪಾದಕರ ಪೈಶಾಚಿಕ ಕೃತ್ಯ: ಶಾಸಕ ನಾಯ್ಕ್ ಖಂಡನೆ

ಬಂಟ್ವಾಳ: ಕಾಶ್ಮೀರ ಪಹಲ್ಗಾಮ್‌ನಲ್ಲಿ ಪಾಪಿ ಪಾಕಿಸ್ಥಾನದ ಭಯೋತ್ಪಾದಕರು ನಡೆಸಿದ ಪೈಶಾಚಿಕ ಕೃತ್ಯದಿಂದ ಅಮಾಯಕ, ಮುಗ್ದ ಪ್ರವಾಸಿಗರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ, ಉಗ್ರರು ಈ ಕೃತ್ಯವನ್ನು ಮಾಡುವ ಮೊದಲು ಪ್ರವಾಸಿಗರ ಧರ್ಮವನ್ನು ಕೇಳಿ ಹಿಂದೂಗಳನ್ನು ಟಾರ್ಗೆಟ್ ಮಾಡಿಕೊಂಡು ಗುಂಡು ಹಾರಿಸಿರುವ ಪೈಶಾಚಿಕ ಕೃತ್ಯವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರು ಕಟು ಶಬ್ದಗಳಿಂದ ಖಂಡಿಸಿದ್ದಾರೆ.

ಅಮಾಯಕ ಕನ್ನಡಿಗರಿಬ್ಬರ ಸಹಿತ ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಬಯಸಿರುವ ಜತೆಗೆ ಅವರ ಕುಟುಂಬಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು  ಅವರು ಪ್ರಾರ್ಥಿಸಿದ್ದಾರೆ.

ಪ್ರವಾಸಿಗರ ಸ್ಮರ್ಗ ಎನ್ನುವ ಕಾರಣಕ್ಕೆ ದೇಶವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾಶ್ಮೀರಕ್ಕೆ ತೆರಳುತ್ತಿದ್ದು, ಆದರೆ ಇಂತಹ ನೀಚ ಕೃತ್ಯದ ಮೂಲಕ ಉಗ್ರರು ತಮ್ಮ ರಾಕ್ಷಸೀತನವನ್ನು ಮತ್ತೆ ಪ್ರದರ್ಶಿಸಿದ್ದಾರೆ. ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಸರಕಾರವು ಭಯೋತ್ಪಾದನೆಯನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ತೆಗೆದುಕೊಂಡಿರುವ ದಿಟ್ಟ ಕ್ರಮಗಳಿಂದ ಪಾಕಿಸ್ಥಾನದ ಉಗ್ರಗಾಮಿಗಳು ಹತಾಶರಾಗಿರುವುದು ಈ ದಾಳಿಯ ಮೂಲಕ ಸ್ಪಷ್ಟಗೊಂಡಿದೆ ಎಂದು ಬಿಡುಗಡೆಗೊಳಿಸಿರುವ ಹೇಳಿಕೆಯಲ್ಲಿ ತಿಳಿಸಿರುವ ಶಾಸಕ ರಾಜೇಶ್ ನಾಯ್ಕ್ ಕೇಂದ್ರ ಸರಕಾರವು ಉಗ್ರರ ಈ ನೀಚ ಕೃತ್ಯಕ್ಕೂ ತಕ್ಕ ಶಾಸ್ತಿಯನ್ನು ಮಾಡಲಿದೆ ಎಂದು ತಿಳಿಸಿದ್ದಾರೆ.

ಕೇಂದ್ರ ಸರಕಾರವು ಮೃತಪಟ್ಟಿರುವವರ ಕುಟುಂಬಗಳ ಜತೆ ನಿಲ್ಲಲಿದ್ದು, ಗಾಯಾಳುಗಳ ಆರೋಗ್ಯ ಸುಧಾರಣೆಯ ನಿಟ್ಟಿನಲ್ಲೂ ಎಲ್ಲಾ ರೀತಿಯ ಪ್ರಯತ್ನಗಳನ್ನು ನಡೆಸುತ್ತಿದೆ. ಜತೆಗೆ ಕಾಶ್ಮೀರದಲ್ಲಿ ಶಾಂತಿ ಮರುಕಳಿಸುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ನೇತೃತ್ವದ ಸರಕಾರ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುವ ವಿಶ್ವಾಸವಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article