ಜಮ್ಮು ಕಾಶ್ಮೀರದಲ್ಲಿ ಉಗ್ರರ ದುಷ್ಕೃತ್ಯ ಖಂಡಿಸಿ ಕಲ್ಲಡ್ಕದಲ್ಲಿ ಅಂಗಡಿ, ಮುಂಗಟ್ಟು ಮುಚ್ಚಿ ಪ್ರತಿಭಟನೆ

ಜಮ್ಮು ಕಾಶ್ಮೀರದಲ್ಲಿ ಉಗ್ರರ ದುಷ್ಕೃತ್ಯ ಖಂಡಿಸಿ ಕಲ್ಲಡ್ಕದಲ್ಲಿ ಅಂಗಡಿ, ಮುಂಗಟ್ಟು ಮುಚ್ಚಿ ಪ್ರತಿಭಟನೆ


ಬಂಟ್ವಾಳ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಅಮಾಯಕರ ಹತ್ಯೆಯನ್ನು ಖಂಡಿಸಿ ಕಲ್ಲಡ್ಕ ಶ್ರೀರಾಮ ಮಂದಿರದ ವತಿಯಿಂದ ಶುಕ್ರವಾರ ರಾ.ಹೆ.ಯ ಕಲ್ಲಡ್ಕದಲ್ಲಿ ಮಧ್ಯಾಹ್ನ 3 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸ್ವಯಂಪ್ರೇರಿತವಾಗಿ ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭ ಕಲ್ಲಡ್ಕ ಮೇಲ್ಸ್ ತುವೆಯ ತಳಭಾಗದಲ್ಲಿ ನಡೆದ ಬೃಹತ್ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಆರ್‌ಎಸ್‌ಎಸ್ ಮುಖಂಡ, ಪುತ್ತೂರು ವಿದ್ಯವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಮಾತನಾಡಿ, ಅಮಾಯಕ, ಮುಗ್ದ ಪ್ರವಾಸಿಗರನ್ನು ಅತ್ಯಂತ ಭೀಬಿತ್ಸವಾಗಿ ಹತ್ಯೆಗೈದ ಉಗ್ರರ ಈ ದುಷ್ಕೃತ್ಯವನ್ನು ಸಹಿಸಲು ಸಾಧ್ಯವೇ ಇಲ್ಲ, ಧರ್ಮದ ಆಧಾರದಲ್ಲಿ ಹುಡುಕಿ, ಹುಡುಕಿ ಹತ್ಯೆಗೈದ ಅಮಾನವೀಯ ಕೃತ್ಯದ ಬಗ್ಗೆ ಕಾಂಗ್ರೆಸ್ ಯಾಕೆ ಮಾತನಾಡುವುದಿಲ್ಲ ಎಂದು ಪ್ರಶ್ನಿಸಿದರು.

ಭಯೋತ್ಪಾದನೆ ಮತ್ತು ಮತಾಂತರದಂತಹ ನೀಚ ಕೃತ್ಯ ಅತ್ಯಂತ ಖಂಡನೀಯವಾಗಿದ್ದು, ಇದರ ವಿರುದ್ಧ ಸಮಸ್ತ ಹಿಂದೂ ಸಮಾಜ ಸೆಟೆದು ನಿಲ್ಲುವ ಅನೀವಾರ್ಯತೆ ಎದುರಾಗಿದೆ. ಭಯೋತ್ಪಾದಕರಿಗೆ ಅವರದೇ ರೀತಿಯಲ್ಲಿ ಪ್ರತೀಕಾರ ತೀರಿಸುವುದಕ್ಕೆ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸಮರ್ಥರಾಗಿದ್ದು, ಇದಕ್ಕೆ ತಕ್ಕ ಉತ್ತರ ನೀಡುವುದು ಶತಸಿದ್ದ ಎಂಬ ಭರವಸೆ ನಮಗಿದೆ ಎಂದರು.

ಜಗತ್ತಿನ ಭಯೋತ್ಪಾದನೆಯ ಕೇಂದ್ರವಾಗಿರುವ ಪಾಪಿ ಪಾಕಿಸ್ತಾನವನ್ನು ನಿರ್ನಾಮ ಮಾಡಿದರೆ ಮಾತ್ರ ಜಗತ್ತಿಗೆ ನೆಮ್ಮದಿ ಸಿಗಬಹುದು ಎಂದ ಅವರು ಈ ನಿಟ್ಟಿನಲ್ಲಿ  ಪ್ರಧಾನಿ ನರೇಂದ್ರ ಮೋದಿಯವರು ಸಂಕಲ್ಪ ಮಾಡಿದ್ದು, ಈ ದಿಟ್ಟ ನಿರ್ಧಾರಕ್ಕೆ ಇಡೀ ದೇಶ ಬೆಂಬಲಿಸಬೇಕಾಗಿದೆ ಎಂದು ಡಾ. ಭಟ್ ಕರೆ ನೀಡಿದರು.

ಧರ್ಮ, ಕರ್ಮ ಭೂಮಿಯಾದ ಭಾರತದ ದೇಶದಲ್ಲಿ ಅನ್ಯಾಯದ ವಿರುದ್ಧ ಹಿಂದೂ ಸಮಾಜ ತಿರುಗಿನಿಂತರೆ ಯಾರಿಗೂ ಉಳಿಗಾಲವಿಲ್ಲ, ಇದಕ್ಕೆ ಸಾಕಷ್ಟು ನಿದರ್ಶನಗಳು ಇವೆ. ಹಾಗಾಗಿ ಹಿಂದೂಗಳ ತಾಳ್ಮೆಯನ್ನು ಕೆಣಕಿ ಪರೀಕ್ಷಿಸದಿರಿ ಎಂದ ಎಚ್ಚರಿಕೆ ನೀಡಿದ ಡಾ. ಭಟ್ ಅವರು ದೇಶದ ಭದ್ರತೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಸಲಹೆ ನೀಡಬೇಕಾದ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಗುಪ್ತಚರ ಇಲಾಖೆಯ ಬಗ್ಗೆ ಪ್ರಶ್ನಿಸುವುದು ಸರಿಯಲ್ಲ, ಕಾಂಗ್ರೆಸ್ ಪಕ್ಷದ ಪ್ರಮುಖರನ್ನು ಗುಂಡಿಕ್ಕಿ ಕೊಲ್ಲುವಾಗ, ಕರ್ನಾಟಕದಲ್ಲಿ ನಡೆಯಿತ್ತಿರುವ ವಿವಿಧ ಘಟನೆಯಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವಾಗ ಇವರ ಗುಪ್ತಚರ ಇಲಾಖೆ ಎಲ್ಲಿ ಹೋಗಿತ್ತು? ಎಂದು ಪ್ರಶ್ನಿಸಿದರು.

ಹಿ.ಜಾ.ವೇ.ಯ ಮುಖಂಡ ರಾಧಾಕೃಷ್ಣ ಅಡ್ಯಂತ್ಯಾಯ ಅವರು ಘಟನೆಯ ಕುರಿತು ಮಾತನಾಡಿದರು.

ಮಾಜಿ ಶಾಸಕರಾದ ಎ. ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ, ಸ್ಥಳೀಯ ಪ್ರಮುಖರಾದ ಕ. ಕೃಷ್ಣಪ್ಪ ಕಲ್ಲಡ್ಕ, ದಿನೇಶ್ ಅಮ್ಟೂರು, ಸುಲೋಚನ ಜಿ.ಕೆ. ಭಟ್, ಸುಜಿತ್ ಕೊಟ್ಟಾರಿ, ಮೋನಪ್ಪ ದೇವಶ್ಯ, ಲಖಿತಾ ಆರ್. ಶೆಟ್ಟಿ, ಯತೀನ್ ಕುಮಾರ್, ಮಿಥುನ್ ಪೂಜಾರಿ, ಅಮಿತ್ ಪೂಜಾರಿ, ಪ್ರೇಮ ಪೂಜಾರಿ, ಜಯಶ್ರೀ, ರತ್ನಾಕರ್ ಶೆಟ್ಟಿ, ನರಸಿಂಹ ಮಾಣಿ, ಪುಷ್ಪರಾಜ್ ಶೆಟ್ಟಿಗಾರ್, ಜಿನರಾಜ್ ಕೋಟ್ಯಾನ್, ಮತ್ತಿತರರು ಉಪಸ್ಥಿತರಿದ್ದರು.

ಆರಂಭದಲ್ಲಿ ಮಡಿದ 27 ಮಂದಿಗೆ ಮೌನ ಪ್ರಾರ್ಥನೆಯ ಮೂಲಕ ಶೃದ್ಧಾಂಜಲಿ ಅರ್ಪಿಸಲಾಯಿತು. ಪ್ರತಿಭಟನೆಯ ಹಿನ್ನಲೆಯಲ್ಲಿ ಕಲ್ಲಡ್ಕದಲ್ಲಿ ಬಹುತೇಕ ಅಂಗಡಿ ಮುಂಗಟ್ಟು ಮುಚ್ಚಿ ಪ್ರತಿಭಟನೆಯಲ್ಲಿ ಭಾಗಿಯಾದರು.

ಬಿಜೆಪಿ ಬಂಟ್ವಾಳ ಮಂಡಲದ ಅಧ್ಯಕ್ಷ ಚೆನ್ನಪ್ಪ ಆರ್. ಕೋಟ್ಯಾನ್ ಸ್ವಾಗತಿಸಿ, ವಂದಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article