ಬೈಕ್ ಸವಾರನಿಗೆ ಹಲ್ಲೆ, ಬೆದರಿಕೆ

ಬೈಕ್ ಸವಾರನಿಗೆ ಹಲ್ಲೆ, ಬೆದರಿಕೆ

ಬಂಟ್ವಾಳ: ದ್ವಿಚಕ್ರ ಸವಾರನೋರ್ವರ ಮೇಲೆ ರಿಕ್ಷಾ ಚಾಲಕನೋರ್ವ ಹಲ್ಲೆ ನಡೆಸಿದ್ದಲ್ಲದೆ ಜೀವಬೆದರಿಕೆ ಒಡ್ಡಿದ ಘಟನೆ ಪಾಣೆಮಂಗಳೂರು ಪೇಟೆಯಲ್ಲಿ ನಡೆದಿದೆ.

ನರಿಕೊಂಬು ಗ್ರಾಮದ ನಾಯಿಲ ನಿವಾಸಿ ಸುನಿಲ್ ಎಂಬವರ ಮೇಲೆ ನಂದಾವರ ನಿವಾಸಿ, ರಿಕ್ಷಾ ಚಾಲಕ ಅಝೀಲ್ ಹಲ್ಲೆ ನಡೆಸಿದ್ದಾನೆಂದು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯಾದ ಕೆಲವೇ ಗಂಟೆಯಲ್ಲಿ ನಗರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಸುನಿಲ್ ಮತ್ತು ದಯಾನಂದ ಎಂಬವರು ದ್ವಿಚಕ್ರ ವಾಹನದಲ್ಲಿ ಸಂಚರಿಸುವ ವೇಳೆ ಹಲ್ಲೆ ನಡೆಸಲಾಗಿದೆಯೆನ್ನಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article