
ಪತ್ರಕರ್ತನ ಸೋಗಿನಲ್ಲಿ ವ್ಯಕ್ತಿಗೆ ಹಲ್ಲೆ: ಜೀವ ಬೆದರಿಕೆ
ಕಾರ್ಕಳ: ಪತ್ರಕರ್ತನ ಸೋಗಿನಲ್ಲಿ ಪರಿಸರದಲ್ಲಿ ತಿರುಗಾಡಿಕೊಳ್ಳುತ್ತಿದ್ದಾತ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸಿ ವಾಪಾಸಾಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿದ ಘಟನೆ ತೆಳ್ಳಾರಿನ ಮೇಲಿನ ಕುಕ್ಕಾಜೆ ರಸ್ತೆಯಲ್ಲಿ ಏ.3 ರಂದು ನಡೆದಿದೆ.
ಕಾರ್ಕಳ ತಾಲೂಕಿನ ದುರ್ಗಾ ಗ್ರಾಮದ ತೆಳ್ಳಾರು ಕುಕ್ಕಾಜೆ ಎಂಬಲ್ಲಿ ಮುಸ್ಲಿಂ ವ್ಯಕ್ತಿ ಜಹೀರ್ ಎಂಬವರ ಮನೆಯಲ್ಲಿ ದುರ್ಗಾಪರಮೇಶ್ವರಿ ದೇವಿಯ ಆರಾಧನೆ ನಡೆಯುತ್ತಿತ್ತು. ಈ ಮನೆಯಲ್ಲಿ ದೇವಿ ದರ್ಶನ ಕೂಡ ನಡೆಯುತ್ತಿತ್ತು. ಈ ಉದ್ದೇಶದಿಂದ ವಿಶ್ವನಾಥ್ ಅವರು ತಮ್ಮ ಕುಟುಂಬದ ಸಮಸ್ಯೆ ಪರಿಹರಿಸಲು ಜಹೀರ್ ಮನೆಗೆ ಬಂದಿದ್ದರು ಎನ್ನಲಾಗಿದೆ.
ಪೂಜೆ ಮುಗಿಸಿವಿಶ್ವನಾಥ್ ಸ್ಕೂಟರ್ನಲ್ಲಿ ವಾಪಾಸು ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಆರೋಪಿ ರಿಯಾಜ್ ವಿಶ್ವನಾಥ್ರ ಸ್ಕೂಟರನ್ನು ತಡೆದು ನಿಲ್ಲಿಸಿ ನೀನು ಇಲ್ಲಿಗೆ ಯಾಕೆ ಬಂದಿದ್ದೆ. ನಿನಗೆ ಬೇರೆ ದೇವಸ್ಥಾನ ಇಲ್ಲವೇ ಎಂದು ಬೈದು ಬೆದರಿಕೆ ಹಾಕಿ ಹಲ್ಲೆ ನಡೆಸಿದ್ದಾನೆ ಮಾತ್ರವಲ್ಲದೆ, ರಿಯಾಜ್ನ ಮಕ್ಕಳಾದ ರಿಯಾನ್ ಮತ್ತು ರಿಪ್ಪಾನ್ ಹಾಗೂ ರಿಮಾನ್ ಕೆಳಗೆ ಬಿದ್ದ ವಿಶ್ವನಾಥ್ರನ್ನು ತುಳಿದು ಮರದ ದೊಣ್ಣೆಯಿಂದ ಹಲ್ಲೆ ನಡೆಸಿದ್ದು ಬೊಬ್ಬೆ ಹೊಡೆದಾಗ ಗಲಾಟೆಗೆ ಬಿಡಿಸಲು ಹೋದ ದೇವಸ್ಥಾನದ ಪ್ರಮುಖ ಜಹೀರ್ ಮತ್ತು ನಜೀರ್ರಿಗೆ ಕೂಡ ಆರೋಪಿ ರಿಯಾಜ್ನು ಜಹೀರ್ರವರಿಗೂ ಹಲ್ಲೆ ನಡೆಸಿ ವಿಶ್ವನಾಥ್ಗೆ ಜೀವ ಬೆದರಿಕೆ ಹಾಕಿದ್ದಾನೆ.
ಹಲ್ಲೆಯಿಂದ ಗಾಯಗೊಂಡ ವಿಶ್ವನಾಥ್ ಚಿಕಿತ್ಸೆಗಾಗಿ ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ತನ್ನ ಮೊಬೈಲನ್ನು ಮನೆಯಲ್ಲೆ ಬಿಟ್ಟು ಪರಾರಿಯಾಗಿದ್ದಾನೆ.
ರಿಯಾಜ್ ತೆಳ್ಳಾರು ಪರಿಸರದಲ್ಲಿ ತಾನೊಬ್ಬ ಪತ್ರಕರ್ತನೆಂದು ಓಡಾಡಿಕೊಂಡು ಫೋಸ್ ನೀಡುತ್ತಿದ್ದ. ಇದಲ್ಲದೇ ತನ್ನ ಮನೆಯ ಆವರಣದಲ್ಲಿ ಹಾಗೂ ವಾಹನಗಳಲ್ಲಿ
ಅಸ್ತ್ರ ಮಿಡೀಯಾ ಎಂದು ಬೋರ್ಡ್ ಅಳವಡಿಸಿ ಪತ್ರಕರ್ತನ ಸೋಗಿನಲ್ಲಿ ಕಾರ್ಕಳ ಸುತ್ತಮುತ್ತ ವಸೂಲಿ ಮಾಡುತ್ತಿದ್ದ ಎನ್ನುವ ಆರೋಪ ಕೇಳಿಬಂದಿದೆ. ಈತನ ವಿರುದ್ಧ ಕಾರ್ಕಳ ಪತ್ರಕರ್ತರ ಸಂಘದಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಲಾಗಿತ್ತು. ಕೆಲವೇ ದಿನಗಳ ಹಿಂದೆ ಕಾರ್ಕಳ ನಗರ ಠಾಣಾ ಪೊಲೀಸರು ಈತನನ್ನು ಕರೆಸಿ ಎಚ್ಚರಿಕೆ ನೀಡಿ ಕಳುಹಿಸಿದ್ದರೆನ್ನಲಾಗಿದೆ.