
ನದಿಗೆ ಹಾರಿದ ವ್ಯಕ್ತಿಯ ಮೃತದೇಹ ಪತ್ತೆ
Friday, April 18, 2025
ಕಾಸರಗೋಡು: ಸೇತುವೆಯಿಂದ ನದಿಗೆ ಹಾರಿ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರ ಮೃತದೇಹ ಶುಕ್ರವಾರ ಬೆಳಿಗ್ಗೆ ಪತ್ತೆಯಾಗಿದೆ.
ಮೃತರನ್ನು ಚೆಂಗಳದ ಶರೀಫ್ (45) ಎಂದು ಗುರುತಿಸಲಾಗಿದೆ.
ಗುರುವಾರ ಸಂಜೆ ಬೈಕ್ ನಲ್ಲಿ ಬಂದ ಶರೀಫ್ ಅವರು ಚಂದ್ರಗಿರಿ ಸೇತುವೆ ಮೇಲೆ ಬೈಕ್ ನಿಲ್ಲಿಸಿ ನದಿಗೆ ಹಾರಿದ್ದರು.
ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ನಾಗರಿಕರು ಶೋಧ ನಡೆಸಿದ್ದರು. ರಾತ್ರಿಯಾದರೂ ಮೃತದೇಹ ಪತ್ತೆ ಹಚ್ಚಲು ಸಾಧ್ಯವಾಗಲಿಲ್ಲ. ಶುಕ್ರವಾರ ಬೆಳಿಗ್ಗೆ ಮತ್ತೆ ಶೋಧ ನಡೆಸಿದಾಗ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಕಾಸರಗೋಡು ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.