
ಎಸ್ಸಿಡಿಸಿಸಿ ಬ್ಯಾಂಕ್ ಸಾರ್ವಕಾಲಿಕೆ ದಾಖಲೆ: 110.40 ಕೋಟಿ ಲಾಭ: ಡಾ. ಎಂ.ಎನ್. ರಾಜೇಂದ್ರ ಕುಮಾರ್
ಮಂಗಳೂರು: ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ಸಿಡಿಸಿಸಿ) 2024-25ರ ಹಣಕಾಸು ವರ್ಷದಚ ಅಂತ್ಯಕ್ಕೆ ರೂ. 110.40 ಕೋಟಿ ಲಾಭ ಗಳಿಸಿದೆ. ಇದು ಬ್ಯಾಂಕ್ ನ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆಯಾಗಿದೆ ಎಂದು ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.
ಬುಧವಾರ ಬ್ಯಾಂಕಿನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕಿಂಗ್ ಸೇವೆಯಲ್ಲಿ ದೇಶಕ್ಕೆ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಭಿವೃದ್ಧಿಯ ಮುಂಚೂಣಿಯಲ್ಲಿದೆ. ಸಹಕಾರಿ ರಂಗದಲ್ಲಿ ವಿಶಿಷ್ಟ ಹಾಗೂ ವಿನೂತನ ಬ್ಯಾಂಕಿಂಗ್ ಸೇವೆಯನ್ನು ನಗರ ಹಾಗೂ ಗ್ರಾಮೀಣ ಪ್ರದೇಶದ ಜನರಿಗೆ ವಿಶಿಷ್ಟ ಹಾಗೂ ವಿನೂತನ ಬ್ಯಾಂಕಿಂಗ್ ಸೇವೆಯನ್ನು ತನ್ನ 113 ಶಾಖೆಗಳ ಮೂಲಕ ನೀಡುತ್ತಿರುವ ಎಸ್ ಸಿಡಿಸಿಸಿ ಬ್ಯಾಂಕ್ ಜನಸಾಮಾನ್ಯರ ಬ್ಯಾಂಕ್ ಆಗಿ ಗುರುತಿಸಿಕೊಂಡಿದೆ. 111 ವರ್ಷಗಳ ಸಾರ್ಥಕ ಸೇವೆಯನ್ನು ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ನೀಡುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವರದಿ ವರ್ಷದಲ್ಲಿ ಅಮೋಘ ಸಾಧನೆಗೈದು, ಕಳೆದ ವರ್ಷ ಕ್ಕಿಂತ ಈ ಬಾರಿ ಲಾಭಾಂಶ ಶೇ 39.59 ಏರಿಕೆಯಾಗಿದೆ (ರೂ.79.09). ಇದು ಎಸ್ ಸಿಡಿಸಿಸಿ ಬ್ಯಾಂಕಿನ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆಯಾಗಿದೆ ಹಾಗೂ ಬ್ಯಾಂಕಿನ ಅನುತ್ಪಾದಕ ಆಸ್ತಿಯ ಪ್ರಮಾಣವು 3.52 ಶೇಕಡದಿಂದ 2.71 ಶೇಕಡಕ್ಕೆ ಇಳಿಕೆಯಾಗಿರುವುದು ಒಂದು ಗಮನಾರ್ಹ ಸಾಧನೆಯಾಗಿದೆ ಎಂದರು.
ಆಧುನಿಕ ಬ್ಯಾಂಕಿಂಗ್ ಸೌಲಭ್ಯಗಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ಎಸ್ ಸಿಡಿಸಿಸಿ ಬ್ಯಾಂಕ್ ಗ್ರಾಹಕರನ್ನು ಹೆಚ್ಚು ಆಕರ್ಷಿಸುತ್ತಿದೆ. ವರದಿ ವರ್ಷದಲ್ಲಿ 17366.68 ಕೋಟಿ ರೂಪಾಯಿಗಳ ಒಟ್ಟು ವ್ಯವಹಾರ ದಾಖಲಿಸಿ ಹೊಸ ಇತಿಹಾಸ ನಿರ್ಮಿಸಿದೆ. ಕಳೆದ ಸಾಲಿನ ಒಟ್ಟು ವ್ಯವಹಾರ (ರೂ.15544.34) ಈ ಬಾರಿ ಶೇ 11.72 ಏರಿಕೆ ಕಂಡಿದೆ. 2025-26ನೆ ಸಾಲಿನಲ್ಲಿ ಬ್ಯಾಂಕ್ ರೂ.19250.00 ಕೋಟಿ ವ್ಯವಹಾರದ ಗುರಿಯನ್ನು ಬ್ಯಾಂಕ್ ಹೊಂದಿದೆ.
ರೂ. 7882.76 ಕೋಟಿ ಠೇವಣಿ:
ಠೇವಣಿಗಳ ಸಂಗ್ರಹದಲ್ಲಿ ಎಲ್ಲಾ ಬ್ಯಾಂಕ್ಗಳಲ್ಲೂ ಸ್ಪರ್ಧೆ ಇದೆ. ಕೇಂದ್ರ ಹಾಗೂ ರಾಜ್ಯ ಸರಕಾರದ ಯಾವುದೇ ಠೇವಣಾತಿ ಇಲ್ಲದೆಯೂ ಎಸ್ ಸಿಡಿಸಿಸಿ ಬ್ಯಾಂಕ್ ತನ್ನ 113 ಶಾಖೆಗಳ ಮುಖಾಂತರ ಒಟ್ಟು 7882.76 ಕೋಟಿ ರೂಪಾಯಿ ಠೇವಣಿ ಸಂಗ್ರಹಿಸಿ ಸಾಧನೆಗೈದಿದೆ.ಮೂಲಕ ಠೇವಣಿ ಸಂಗ್ರಹದಲ್ಲಿ ರಾಜ್ಯದ ಇತರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ಗಳಲ್ಲಿ ಮುಂಚೂಣಿಯಲ್ಲಿದೆ. ಕಳೆದ ಸಾಲಿನ ಠೇವಣಿ ಸಂಗ್ರಹಕ್ಕಿಂತ ಈ ಬಾರಿ ಶೇ.9.11 ಏರಿಕೆಯಾಗಿದೆ.
ರೂ.7775.44 ಕೋಟಿ ಮುಂಗಡ:
ಸ್ಪರ್ಧಾತ್ಮಕ ವ್ಯವಹಾರದಲ್ಲಿ ಬ್ಯಾಂಕ್ ರೂ.7775.44 ಕೋಟಿ ಮುಂಗಡ ನೀಡಿದೆ. ಕೃಷಿ ಹಾಗೂ ಕೃಷಿ ಅಭಿವೃದ್ಧಿಗೆ ಅಲ್ಪಾವಧಿ ಸಾಲವಾಗಿ ರೂ.2130.95 ಕೋಟಿ ರೂಪಾಯಿ. ಮಧ್ಯಮಾವಧಿ ಸಾಲ ರೂ.169.79 ಕೋಟಿ, ಹೀಗೆ ಕೃಷಿ ಕ್ಷೇತ್ರಕ್ಕೆ ಒಟ್ಟು ರೂ.2300.74 ಕೋಟಿ ಸಾಲ ನೀಡಲಾಗಿದ್ದು, ಕೃಷಿಯೇತರ ಕ್ಷೇತ್ರಕ್ಕೆ ರೂ.5474.70 ಕೋಟಿ ಸಾಲ ನೀಡಲಾಗಿದೆ.
ಸತತ 30 ವರ್ಷಗಳಿಂದ ಕೃಷಿ ಸಾಲ ಮರುಪಾವತಿಯಲ್ಲಿ ಶೇಕಡ 100ರ ಸಾಧನೆ ಬ್ಯಾಂಕ್ ವರದಿ ಮಾಡಿರುವುದು ರಾಷ್ಟ್ರೀಯ ದಾಖಲೆಯಾಗಿದೆ.
ಮುಂದಿನ ಯೋಜನೆಗಳು..
ಇಂಟರ್ ಬ್ಯಾಂಕ್ ಮೊಬೈಲ್ ಪೇಮೆಂಟ್ ಸಿಸ್ಟಮ್ ಯೋಜನೆ: IMPS (Inter Bank Mobile) Payment System) ಯೋಜನೆಯನ್ನು ಕಾರ್ಯಗತಗೊಳಿಸಲು ರೂಪುರೇಷೆ ಸಿದ್ಧಪಡಿಸಲಾಗಿದೆ.ಈ ಯೋಜನೆಯಿಂದ ಗ್ರಾಹಕರು ಮೊಬೈಲ್ ಮುಖಾಂತರ ತಮ್ಮ ಖಾತೆಯಿಂದ ಇತರಬ್ಯಾಂಕಿನ ಖಾತೆಗೆ ಹಣ ವರ್ಗಾಯಿಸಬಹುದು.
ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (Unilied Payments Interface - UPI) : ಇದು ಜನಸಾಮಾನ್ಯರು ಉಪಯೋಗಿಸುವ ಯುಪಿಐ ಪಾವತಿ ವಿಧಾನವಾಗಿದೆ. ಈ ವಿಧಾನದಲ್ಲಿ ಸ್ಮಾರ್ಟ್ ಫೋನ್ ಅನ್ನು ವರ್ಚುವಲ್ ಡೆಬಿಟ್ ಕಾರ್ಡ್ನಂತೆ ಬಳಸಬಹುದು. ಇದರಿಂದ ತ್ವರಿತವಾಗಿ ಹಣವನ್ನು ಪಾವತಿಸಬಹುದು ಹಾಗೂ ಸ್ವೀಕರಿಸಬಹುದು. ಮಾತ್ರವಲ್ಲದೆ, ಯುಪಿಐ ಸೇವೆಗಳಾದ ಗೂಗಲ್ ಪೇ, ಫೋನ್ ಪೇ ಹಾಗೂ ಇತರ ಪಾವತಿ ವಿಧಾನವನ್ನು ಬಳಸಬಹುದು. ಅಲ್ಲದೆ, ವಿದ್ಯುತ್ ಬಿಲ್, ನೀರಿನ ಬಿಲ್ ಹಾಗೂ ಟೆಲಿಫೋನ್ ಬಿಲ್ಗಳನ್ನು ಪಾವತಿಸಲು ಅವಕಾಶವಿದೆ.
ಯುಪಿಐ ಚಾಲಿತ ಆ?ಯಪ್ಗಳೊಂದಿಗೆ ಕಿಖ ಅoಜe ಸ್ಕ್ಯಾನ್ ಮಾಡುವ ಮೂಲಕ ವ್ಯಾಪಾರ ಕೇಂದ್ರಗಳಲ್ಲೂ ಈ ಮಾದರಿಯನ್ನು ಉಪಯೋಗಿಸಬಹುದು ಎಂದರು.
10 ಹೊಸ ಶಾಖೆಗಳು: ಬ್ಯಾಂಕ್ ಮುಂದಿನ ಅವಧಿಯಲ್ಲಿ 10 ಹೊಸ ಶಾಖೆಗಳನ್ನು ತೆರೆಯುವ ಯೋಜನೆಯನ್ನು ಹಮ್ಮಿಕೊಂಡಿದೆ ಎಂದು ತಿಳಿಸಿದರು.
ಮೇ 10ರಂದು ಮಂಗಳೂರಿನಲ್ಲಿ ಸುಮಾರು ಒಂದೂವರೆ ಲಕ್ಷ ನವೋದಯ ಸ್ವ ಸಹಾಯ ಗುಂಪುಗಳ ಸದಸ್ಯರು ತಮ್ಮ ಸಮವಸ್ತ್ರ ದೊಂದಿಗೆ ಬೆಳ್ಳಿ ಹಬ್ಬದ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರಾದ ಭಾಸ್ಕರ್.ಎಸ್. ಕೋಟ್ಯಾನ್, ಎಂ. ವಾದಿರಾಜ್ ಶೆಟ್ಟಿ.ಶಶಿಕುಮಾರ್ ರೆ, ದೇವಿ ಪ್ರಸಾದ್ ಶೆಟ್ಟಿ, ಕೆ. ಜೈರಾಜ್ ಬಿ. ರೈ. ಮೋನಪ್ಪ ಶೆಟ್ಟಿ ಎಕ್ಕಾರು, ಎಸ್.ಬಿ. ಜಯರಾಮ ರೈ, ಸದಾಶಿವ ಉಳ್ಳಾಲ್, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗೋಪಾಲಕೃಷ್ಣ ಭಟ್ ಕೆ. ಉಪಸ್ಥಿತರಿದ್ದರು.