ಏ.5 ರಂದು ಉಸ್ತುವಾರಿ ಸಚಿವರರು ಜಿಲ್ಲೆಗೆ

ಏ.5 ರಂದು ಉಸ್ತುವಾರಿ ಸಚಿವರರು ಜಿಲ್ಲೆಗೆ

ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಏ.5 ರಂದು  ಜಿಲ್ಲೆಗೆ ಆಗಮಿಸಲಿದ್ದಾರೆ.

ಅಂದು ಬೆಳಿಗ್ಗೆ 6.55 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣ ಆಗಮನ, ಬೆಳಿಗ್ಗೆ 7.40 ಗಂಟೆಗೆ ಸರ್ಕ್ಯೂಟ್ ಹೌಸ್, 9.30ಕ್ಕೆ ನಗರದ ಕೊಡಿಯಾಲಬೈಲ್ ಜೈಲ್ ರಸ್ತೆಯಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ  ಮತ್ತು ಪಶುರೋಗ ತಪಾಸಣೆ ಮತ್ತು ಮಾಹಿತಿ ಕೇಂದ್ರದ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ, 10 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಭೇಟಿ ಮತ್ತು ಕಾರ್ಯಕರ್ತರ ಜೊತೆ ಸಂವಾದ, 11.30ಕ್ಕೆ ಉರ್ವಸ್ಟೋರ್ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಡಾ.ಬಾಬು ಜಗಜೀವನ ರಾಂ ಅವರ 118ನೇ ಜನ್ಮದಿನಾಚರಣೆ ಕಾರ್ಯಕ್ರಮ.

ಮಧ್ಯಾಹ್ನ 12.30ಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಹೊಸ ಕಚೇರಿಯ ಕಟ್ಟಡ ವೀಕ್ಷಣೆ, 2.30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೇಸಿಗೆಯ ಸಂದರ್ಭದಲ್ಲಿ ಕುಡಿಯುವ ನೀರಿನ ವ್ಯವಸ್ಥೆ (ಮಂಗಳೂರು ಮಹಾನಗರಪಾಲಿಕೆಯು ಸೇರಿದಂತೆ) ಹಾಗೂ ಜಿಲ್ಲೆಯಲ್ಲಿ ಬೇಸಿಗೆಯಿಂದ ತದೋರಬಹುದಾದ ಸಮಸ್ಯೆಗಳ ಪರಿಹಾರಕ್ಕೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚೆ, ಸಂಜೆ 5.35 ಗಂಟೆಗೆ  ಮಂಗಳೂರು ವಿಮಾನ ನಿಲ್ದಾಣದಿಂದ ಸಚಿವರು ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article