ಏ.9 ರಂದು ಮಂಗಳೂರಿನಲ್ಲಿ ಜನಾಕ್ರೋಶ ಯಾತ್ರೆ

ಏ.9 ರಂದು ಮಂಗಳೂರಿನಲ್ಲಿ ಜನಾಕ್ರೋಶ ಯಾತ್ರೆ

ಮಂಗಳೂರು: ಕರ್ನಾಟಕ ಭ್ರಷ್ಟ ಜನವಿರೋಧಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ನಡೆಯುವ ಜನಾಕ್ರೋಶ ಯಾತ್ರೆ ಮಂಗಳೂರಿನಲ್ಲಿ ಏ.9 ರಂದು ಸಂಜೆ 3 ಗಂಟೆಗೆ ಮಂಗಳೂರು ನಗರದ ಡಾ. ಬಿ.ಆರ್. ಅಂಬೇಡ್ಕರ್ (ಜ್ಯೋತಿ) ವೃತ್ತದಿಂದ ಮಂಗಳೂರಿನ ಕ್ಲಾಕ್‌ಟವರ್ ಬಳಿಯಿರುವ ಮಿನಿ ವಿಧಾನಸೌಧದ ತನಕ ಪಾದಯಾತ್ರೆ ಬಳಿಕ ಸಾರ್ವಜನಿಕ ಪ್ರತಿಭಟನಾ ಸಭೆ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದರು.

ಈ ಪ್ರತಿಭಟನಾ ಕಾರ್ಯಕ್ರಮದ ಪೂರ್ವಭಾವಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಅಭೆಯಲ್ಲಿ ಅವರು ಇಂದು ಮಾತನಾಡಿದರು.

ಈ ಜನಾಕ್ರೋಶ ಯಾತ್ರೆಯಲ್ಲಿ ಪ್ರತಿಪಕ್ಷದ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ಪ್ರತಿಪಕ್ಷನಾಯಕ ಛಲವಾದಿ ನಾರಾಯಣ ಸ್ವಾಮಿ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಮಾಜಿ ಸಚಿವ ರಾಮುಲು, ಮುಖ್ಯ ಸಚೇತಕ ಎನ್. ರವಿ ಕುಮಾರ್ ಮತ್ತು ರಾಜ್ಯದ ಪ್ರದಾನಕಾರ್ಯದರ್ಶಿಗಳಾದ ಸುನೀಲ್ ಕುಮಾರ್, ಪಿ. ರಾಜೀವ್ ಕುಡುಚ್ಚಿ ಪ್ರೀತಂ ಗೌಡ ಮತ್ತು ಮತ್ತಿತರರ ರಾಜ್ಯದ ಹಿರಿಯ, ಯುವ ನಾಯಕರು ಭಾಗವಹಿಸಲಿದ್ದಾರೆ. ಜಿಲ್ಲೆಯ ವಿವಿಧ ಭಾಗಗಳಿಂದ ಸಾವಿರಾರು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. 

ರಾಜ್ಯ ಕಾರ್ಯದರ್ಶಿ ಹಾಗೂ ಸಂಸದ ಕ್ಯಾ. ಬ್ರಿಜೇಶ್ ಚೌಟ, ರಾಜ್ಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಹರೀಶ್ ಪೂಂಜಾ, ಶಾಸಕರುಗಳಾದ ಉಮಾನಾಥ್ ಕೋಟ್ಯಾನ್, ರಾಜೇಶ್ ನಾಕ್, ಡಿ. ವೇದವ್ಯಾಸ ಕಾಮತ್, ಡಾ. ವೈ. ಭರತ್ ಶೆಟ್ಟಿ, ಭಾಗೀರಥಿ ಮುರುಳ್ಯ, ಕಿಶೋರ್ ಕುಮಾರ್ ಬೊಟ್ಯಾಡಿ, ಮಾಜಿ ಶಾಸಕರಾದ ಕೆ. ಮೋನಪ್ಪ ಭಂಡಾರಿ, ಕ್ಯಾ. ಗಣೇಶ್ ಕಾರ್ಣಿಕ್, ಸಂಜೀವ ಮಠಂದೂರು, ವಿಭಾಗ ಪ್ರಭಾರಿ ಹಾಗೂ ಕಾರ್ಯಕ್ರಮದ ಉಸ್ತುವಾರಿ ಉದಯ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ ಪ್ರಸ್ತಾವಿಸಿ, ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಯತೀಶ್ ಆರ್ವಾರ್ ಕಾರ್ಯಕ್ರಮ ನಿರೂಪಿಸಿದರು. ಮಹಿಳಾ ಮೋರ್ಚಾ ಅಧ್ಯಕ್ಷೆ ಡಾ. ಮಂಜುಳಾ ಎ. ರಾವ್ ವಂದಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article