
ಅವೈಜ್ಞಾನಿಕ ಜಾಮರ್: ನಾಳೆ ಶಾಸಕ ಕಾಮತ್ ನೇತೃತ್ವದಲ್ಲಿ ಮಂಗಳೂರು ಬೈಲು ಮುಂಭಾಗ ಪ್ರತಿಭಟನೆ
Friday, April 4, 2025
ಮಂಗಳೂರು: ಮಂಗಳೂರಿನ ಜೈಲ್ನಲ್ಲಿ ಅವೈಜ್ಞಾನಿಕವಾಗಿ ಅಳವಡಿಸಲಾದ ಜಾಮರ್ನಿಂದಾಗಿ ಕಳೆದ ಕೆಲವು ವಾರಗಳಿಂದ ಸ್ಥಳೀಯ ನಿವಾಸಿಗಳು, ವ್ಯಾಪಾರಿಗಳು, ಉದ್ಯೋಗಿಗಳಿಗೆ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ಮಾಡಿದರೂ ಕೇವಲ ಭರವಸೆ ಮಾತ್ರ ನೀಡಲಾಗುತ್ತಿದೆ.
ಸದ್ಯ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರವಂತೂ ನಾಗರಿಕರು ಬೀದಿಗೆ ಇಳಿಯದಿದ್ದರೆ ಅದೆಂತಹದೇ ಸಮಸ್ಯೆಯಿದ್ದರೂ ಕ್ಯಾರೇ ಎನ್ನುತ್ತಿಲ್ಲ. ಹಾಗಾಗಿ ಸಾರ್ವಜನಿಕರು ಜಾಮರ್ನಿಂದಾಗಿ ಇಲ್ಲಿ ಅನುಭವಿಸುತ್ತಿರುವ ತೊಂದರೆಯ ವಿರುದ್ಧ ಬೀದಿಗೆ ಇಳಿಯುವುದು ಅನಿವಾರ್ಯವಾಗಿದ್ದು ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ರಸ್ತೆ ತಡೆಯ ಪ್ರತಿಭಟನೆ ಏ.5 ರಂದು ಬೆಳಗ್ಗೆ 11 ಗಂಟೆಗೆ ಮಂಗಳೂರು ಜೈಲಿನ ಮುಂಭಾಗ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.