
ಓಜೋನ್ ಪದರದ ನಾಶ ತಡೆಯಬೇಕಾಗಿದೆ: ಆರ್.ಕೆ. ನಾಯರ್
ಮಂಗಳೂರು: ಭೂಮಿಯ ಮೇಲೆ ಸೂರ್ಯನ(ನೆರಳಾತೀತ ವಿಕಿರಣ)ವಿಷ ಕಿರಣ ಪ್ರವೇಶಿಶದಂತೆ ನಮ್ಮನ್ನು ರಕ್ಷಿಸುತ್ತಿರುವ ಓಜೋನ್ ಪದರಕ್ಕೆ ಹಾನಿಯಾಗುತ್ತಿದೆ. ಇದಕ್ಕೆ ಹಸಿರು ಪರಿಸರ ನಾಶ ಒಂದು ಪ್ರಮುಖ ಕಾರಣ. ಇದನ್ನು ತಡೆಯಲು ಕಾಡು ಬೆಳೆಸಬೇಕಾಗಿದೆ. ಹಸಿರು ಪರಿಸರವನ್ನು ಸಂರಕ್ಷಿಸಬೇಕಾಗಿದೆ ಎಂದು ಗ್ರೀನ್ ಹೀರೋ ಆಫ್ ಇಂಡಿಯಾ ಖ್ಯಾತಿಯ ಆರ್.ಕೆ. ನಾಯರ್ ತಿಳಿಸಿದರು.
ಅವರು ನಗರದ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕ, ಸ್ವಸ್ತಿಕಾ ನ್ಯಾಷನಲ್ ಬ್ಯುಸಿನೆಸ್ ಸ್ಕೂಲ್ ಊರ್ವ, ಗ್ಲೋಬಲ್ ಗ್ರೀನ್ ಇಕೋ ಫೌಂಡೇಶನ್ ಇದರ ವತಿಯಿಂದ ಹಮ್ಮಿಕೊಂಡ ಪರಿಸರ ಸಂರಕ್ಷಣೆ ಮೈ ಪ್ಲಾನೆಟ್ ಮೈ ಪ್ರೈಡ್ ವಿಷಯದ ಬಗ್ಗೆ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು.
ಬೇಸಗೆ ಬಿಸಿ ಹೆಚ್ಚುತ್ತಿರುವುದು, ಹವಾಮಾನ ಬದಲಾವಣೆ ಎಲ್ಲಾ ವೈಪರೀತ್ಯಗಳಿಗೂ ಹಸಿರು ಪರಿಸರ ನಾಶವಾಗುತ್ತಿರುವುದಕ್ಕೂ ನಿಕಟ ಸಂಬಂಧ ಇದೆ. ಪ್ರಕೃತಿ ತನ್ನ ಸಂರಕ್ಷಣೆಗಾಗಿ ತನ್ನದೆ ಆದ ವ್ಯವಸ್ಥೆ ನಿರ್ಮಿಸಿದೆ. ಈ ಬಗ್ಗೆ ಅರಿವಿನ ಕೊರತೆಯಿಂದ ನಾವು ನಮಗೆ ಅಪಾಯವನ್ನು ತಂದುಕೊಳ್ಳುತ್ತಿದ್ದೇವೆ. ಭೂಮಿಯ ಮೇಲೆ ಸೂರ್ಯನ ವಿಷ ಕಿರಣಪ್ರವೇಶದಂತೆ ಇರುವ ಓಜೋನ್ ಪದರ ನಮಗೆ ಮಳೆ ಬಿಸಿಲಿನಿಂದ ರಕ್ಷಿಸುವ ಕೊಡೆಯ ರೀತಿ ಇದೆ. ಪರಿಸರ ಹಾನಿ, ಕಾಡು ನಾಶವಾಗಿರುವ ಪ್ರದೇಶದಲ್ಲಿ ಅದಕ್ಕೆ ಹಾನಿ ಯಾಗಿದೆ. ಈ ವಿಷ ಕಿರಣಗಳು ಭೂಮಿಯನ್ನು ಪ್ರವೇಶಿಸಿದರೆ ಮನುಷ್ಯರಿಗೆ ಅಪಾಯವನ್ನುಂಟು ಮಾಡುತ್ತದೆ. ಅದರ ರಂಧ್ರವನ್ನು ಸರಿಪಡಿಸಲು ಹಸುರು ಪರಿಸರದ ಸಂರಕ್ಷಣೆ, ಪರಿಸರ ಸಮತೋಲನದ ಕೆಲಸಗಳನ್ನು ನಾವು ಜೊತೆಯಾಗಿ ನಮ್ಮ ಭೂಮಿಯನ್ನು ಉಳಿಸಿಕೊಳ್ಳಬೇಕಾಗಿದೆ ಎಂದು ಆರ್.ಕೆ. ನಾಯರ್ ತಿಳಿಸಿದ್ದಾರೆ.
ಸ್ವಸ್ತಿಕ್ ನ್ಯಾಷನಲ್ ಬ್ಯುಸಿನೆಸ್ ಸ್ಕೂಲ್ ಇದರ ಅಧ್ಯಕ್ಷ ರಾಘವೇಂದ್ರ ಹೊಳ್ಳ, ಪ್ರಾಂಶುಪಾಲೆ ಮಾಲಿನಿ ಹೆಬ್ಬಾರ್, ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನಾ ಸ್ವಸ್ತಿಕಾ ನ್ಯಾಷನಲ್ ಬ್ಯುಸಿನೆಸ್ ಸ್ಕೂಲ್ ಘಟಕದ ಸಂಯೋಜಕಿ ವಿದ್ಯಾ ಲಕ್ಷ್ಮೀ, ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಉಪಾಧ್ಯಕ್ಷ ಭಾಸ್ಕರ ರೈ ಕೆ., ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್., ಕಾರ್ಯಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ ಮತ್ತಿತರರು ಉಪಸ್ಥಿತರಿದ್ದರು. ರಕ್ಷಿತಾ ಕಾರ್ಯಕ್ರಮ ನಿರೂಪಿಸಿದರು.