ಸಾಮಾನ್ಯನಿಗೂ ನ್ಯಾಯ ದೊರೆಯಲಿ: ಹೈಕೋರ್ಟ್ ನಿವೃತ ನ್ಯಾಯಮೂರ್ತಿ ಕೃಷ್ಣ ಭಟ್

ಸಾಮಾನ್ಯನಿಗೂ ನ್ಯಾಯ ದೊರೆಯಲಿ: ಹೈಕೋರ್ಟ್ ನಿವೃತ ನ್ಯಾಯಮೂರ್ತಿ ಕೃಷ್ಣ ಭಟ್


ಮಂಗಳೂರು: ನ್ಯಾಯಧೀಶರ ಕರ್ತವ್ಯ ಸಾಮಾನ್ಯವಾದುದಲ್ಲ ವಾದಿ ಮತ್ತು ಪ್ರತಿವಾದಿ ಎರಡು ಕಡೆಯವರು ನಮಗೆ ನ್ಯಾಯ ಸಿಕ್ಕೆ ಸಿಗುತ್ತದೆ ಎಂದೇ ನ್ಯಾಯಲಯಕ್ಕೆ ಬರುತ್ತಾರೆ ಪ್ರತಿ ಸಂದರ್ಭದಲ್ಲಿ ನ್ಯಾಯವಾದಿಗಳು ಮಹಾಸ್ವಾಮಿ ಮಹಾಸ್ವಾಮಿ ಎನ್ನುವುದು ನಾವು ದೇವರೆಂದು ಅಲ್ಲ ದೇವರಂತೆ ನಿಷ್ಪಕ್ಷಪಾತ ಸಾಮಾನ್ಯರಿಗೂ ನ್ಯಾಯ ಸಿಗುವಂತಾಗಲಿ ಎಂದು ಹೈಕೋರ್ಟ್ ನಿವೃತ ನ್ಯಾಯಮೂರ್ತಿ ಕೃಷ್ಣ ಭಟ್ ಹೇಳಿದರು.


ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯ ಇವರ ಸಹಯೋಗದೊಂದಿಗೆ ಅಖಿಲ ಭಾರತೀಯ ಅಧಿವಕ್ತ ಪರಿಷತ್ ಮತ್ತು ನಿರ್ಮಲ ಭಾರತ ಚಾರಿಟೇಬಲ್ ಟ್ರಸ್ಟ್ ಇದರ ಸಹಯೋಗದಲ್ಲಿ ಎಸ್‌ಡಿಎಂ ಕಾಲೇಜಿನ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ನ್ಯಾಯಾಂಗ ಪರೀಕ್ಷೆಗಳು ಕಾರ್ಯಗಾರವನು ಉದ್ಘಾಟಿಸಿ ಮಾತನಾಡಿದ ಅವರು ಭಾರತವು ವಿವಿಧತೆಯಲ್ಲಿ ಏಕತೆ ಕಂಡ ರಾಷ್ಟ್ರ ತೀರ್ಪುಗಳನ್ನ ನೀಡುವಾಗ ಸಂವಿಧಾನಬದ್ಧವಾಗಿ ಸಾಮಾನ್ಯರಿಗೂ ಅರ್ಥವಾಗುವ ಭಾಷೆಯಲ್ಲಿರಲಿ ಎಂದರು.


ಬಡತನದಿಂದ ಬಂದ ವಿದ್ಯಾರ್ಥಿಗಳು ನ್ಯಾಯಾಂಗ ಪರೀಕ್ಷೆಯಲ್ಲಿ ಪಾಲ್ಗೊಳ್ಳಬೇಕು ಮತ್ತು ಗೌರವಯುತ ಹುದ್ದೆ ಪಡೆಯಬೇಕು ಎಂದು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ನಿರ್ಮಲ ಚಾರಿಟೇಬಲ್ ಟ್ರಸ್ಟ್ ಮುಖ್ಯಸ್ಥ ರಮೇಶ್ ಕೆ. ಹೇಳಿದರು.


ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗಾಗಿ ಸಂವಹನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ವಿದ್ಯಾರ್ಥಿಗಳಾದ ಸಾಕ್ಷಿ, ಗಣೇಶ್ ರಾವ್, ಶಂಕರ್ ಓಬಳಬಂಡಿ ಹಲವು ವಿದ್ಯಾರ್ಥಿಗಳು ತಮ್ಮ ತಮ್ಮ ಗೊಂದಲಗಳನ್ನು ನಿವಾರಿಸಿಕೊಂಡರು.


ನಿರ್ಮಲ ಭಾರತ್ ಚಾರಿಟೇಬಲ್ ಟ್ರಸ್ಟ್‌ನ ಮುಖ್ಯಸ್ಥ ರಮೇಶ್ ಕೆ. ಪ್ರಾಸ್ತವಿಕ ನುಡಿಗಳನ್ನಾಡಿದರು.

ಅಖಿಲ ಭಾರತೀಯ ಅಧಿವಕ್ತ ಪರಿಷತ್‌ನ ಜಿಲ್ಲಾ ಸಂಚಾಲಕಿ ಪುಷ್ಪಲತಾ ವಂದಿಸಿದರು. ಎಸ್‌ಡಿಎಂ ಕಾನೂನು ಕಾಲೇಜಿನ ಪ್ರಾಂಶುಪಾಲ ಡಾ. ತಾರಾನಾಥ್, ಸೆಮಿನಾರ್ ಅಂಡ್ ಕಾನ್ಫರೆನ್ಸ್ ಸೆಲ್‌ನ ಸಂಯೋಜಕಿ ಡಾ. ಅನ್ನಪೂರ್ಣ ಶೆಟ್ ಉಪಸ್ಥಿತರಿದ್ದರು. 

ವಿದ್ಯಾರ್ಥಿನಿ ಶ್ರೀಲಕ್ಷ್ಮಿ ಕಾರ್ಯಕ್ರಮವನ್ನು ನಿರೂಪಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article