
ಯುವಕ ಹಲ್ಲೆ: ಸಮಗ್ರ ತನಿಖೆಗೆ ಒತ್ತಾಯ
Tuesday, April 29, 2025
ಮಂಗಳೂರು: ಮಂಗಳೂರಿನ ಹೊರವಲಯದ ಕುಡುಪು ಬಳಿ ಉತ್ತರ ಭಾರತದ ಯುವಕನಿಗೆ ಗಂಭೀರವಾಗಿ ಹಲ್ಲೆಗೈದು ಹತ್ಯೆ ಮಾಡಿರುವ ಘಟನೆ ಅತ್ಯಂತ ಖಂಡನೀಯ, ಇದನ್ನು ಸಮಗ್ರ ತನಿಖೆಯಾಗಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿ ನವಾಝ್ ಒತ್ತಾಯಿಸಿದ್ದಾರೆ.
ಈ ಘಟನೆಯ ಬಗ್ಗೆ ಸಾರ್ವಜನಿಕರಲ್ಲಿ ಸಾಕಷ್ಟು ಗೊಂದಲ ಮೂಡಿದ್ದು, ವದಂತಿಗಳು ಹರಿದಾಡುತ್ತಿದೆ. ಈ ಅಮಾನವೀಯ ಕೃತ್ಯದಲ್ಲಿ ಭಾಗಿಯಾಗಿರುವ ಗುಂಪನ್ನು ಶೀಘ್ರವೇ ಪತ್ತೆ ಹಚ್ಚಿ ಈ ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ನಾನು ಪೊಲೀಸ್ ಇಲಾಖೆಯಲ್ಲಿ ಮನವಿ ಮಾಡುತ್ತೇನೆ.
ಇಂತಹ ಹತ್ಯೆಗಳು ಮರುಕಳಿಸಬಾರದು, ಪೊಲೀಸರು ಈ ಬಗ್ಗೆ ನಿರ್ದಾಕ್ಷಿಣ್ಯವಾಗಿ ತನಿಖೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.