ಹೆಣ್ಣು ಮಗು ಬಿಟ್ಟು ಹೋದ ಪ್ರಕರಣಕ್ಕೆ ತಿರುವು: ಮಗುವಿನ ತಂದೆ ಪತ್ತೆ

ಹೆಣ್ಣು ಮಗು ಬಿಟ್ಟು ಹೋದ ಪ್ರಕರಣಕ್ಕೆ ತಿರುವು: ಮಗುವಿನ ತಂದೆ ಪತ್ತೆ


ಮಂಗಳೂರು: ಬೆಳ್ತಂಗಡಿ ಬೆಳಾಲು ಗ್ರಾಮದ ಕೊಡೋಳುಕೆರೆ -ಮುಂಡ್ರೋಟ್ಟು ರಸ್ತೆಯಲ್ಲಿ ಮಾ.22 ರಂದು ಬೆಳಗ್ಗೆ ಒಂದುವರೇ ತಿಂಗಳ ಹೆಣ್ಣು ಮಗುವನ್ನು ಬಿಟ್ಟು ಹೋಗಿರುವ ಪ್ರಕರಣಕ್ಕೆ ರೋಚಕ ತಿರುವು ಲಭಿಸಿದ್ದು, ಮಗು ಬೆಳಾಲು ನಿವಾಸಿಯದ್ದು ಎಂಬುವುದು ಬಹಿರಂಗಗೊಂಡಿದೆ. ಇದೀಗ ಧರ್ಮಸ್ಥಳ ಪೊಲೀಸರು ಮಗುವಿನ ತಂದೆಯನ್ನು ಪತ್ತೆಹಚ್ಚಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳನ್ನು ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮಾಯ ನಿವಾಸಿ ತಿಮ್ಮಪ್ಪ ಗೌಡರ ಮಗ ಸೆಕ್ಯೂರಿಟಿ ಕೆಲಸ ಮಾಡುತ್ತಿದ್ದ ರಂಜಿತ್ ಗೌಡ (27) ಮತ್ತು ಧರ್ಮಸ್ಥಳ ಗ್ರಾಮದ ಕೊಲಂಗಾಜೆಯ ಮಂಗಳೂರಲ್ಲಿ ಕೆಲಸ ಮಾಡುತ್ತಿದ್ದ ಸುಶ್ಮೀತಾ ಎಂದು ಗುರುತಿಸಲಾಗಿದೆ. ಧರ್ಮಸ್ಥಳ ಪೊಲೀಸರು ಮಗುವಿನ ತಂದೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು. ಪುತ್ತೂರು ಆಶ್ರಮದಲ್ಲಿರುವ ಮಗುವನ್ನು ತಂದೆ-ತಾಯಿಗೆ ಕಾನೂನು ಪ್ರಕ್ರಿಯೆ ಮುಗಿಸಿದ ಬಳಿಕ ಹಸ್ತಾಂತರಿಸಲ್ಲಿದ್ದಾರೆ.

ಬೆಳಾಲಿನ ಕಾಡು ಪ್ರದೇಶದಲ್ಲಿ ಪತ್ತೆಯಾದ ಮಗುವನ್ನು ಸಾರ್ವಜನಿಕರು ರಕ್ಷಿಸಿ ಆರೈಕೆ ಮಾಡಿದ್ದರು. ನಂತರ ಧರ್ಮಸ್ಥಳ ಪೊಲೀಸರ ಸಮ್ಮುಖದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದು ಪುತ್ತೂರು ಅಶ್ರಮಕ್ಕೆ ಹಸ್ತಾಂತರಿಸಿದ್ದರು.

ಘಟನೆಯ ವಿವರ..

ರಂಜಿತ್ ಮತ್ತು ಸುಶ್ಮೀತಾ ಪರಸ್ಪರ ಪ್ರೀತಿಸುತ್ತಿದ್ದು, ಈ ವಿಚಾರ ಎರಡು ಮನೆಯವರಿಗೂ ತಿಳಿದಿರಲಿಲ್ಲ ಎನ್ನಲಾಗಿದೆ. ಈ ಮಧ್ಯೆ ಈಕೆ ಗರ್ಭಿಣಿಯಾಗಿದ್ದ ವಿಚಾರ ಯಾರಿಗೂ ಹೇಳದೆ ಇಬ್ಬರು ಮಾತ್ರ ಜಾಗೃತೆ ವಹಿಸಿದ್ದರು. ಕ್ಲಿನಿಕ್‌ಗೆ ಪ್ರತಿ ತಿಂಗಳು ದಂಪತಿಗಳಾಗಿ ಹೋಗುತ್ತಿದ್ದ ಇವರು, ತಾಯಿ ಕಾರ್ಡ್ ಕೇಳಿದ್ದಕ್ಕೆ ಅದು ಕಾಣೆಯಾಗಿದೆ ಅಂತ ಹೇಳುತ್ತಿದ್ದರು ಎನ್ನಲಾಗಿದೆ. 

ಉಜಿರೆಯಲ್ಲಿ ಬಾಡಿಗೆ ಮನೆ ಮಾಡಿ ಆಕೆಯನ್ನು ಬಿಟ್ಟಿದ್ದ ಆತ ವಾರಕ್ಕೆ ಒಮ್ಮೆ ಬಂದು ನೋಡಿ ಹೋಗುತ್ತಿದ್ದು, ನಾರ್ಮಲ್ ಡೆಲಿವರಿ ಆಗಿದ್ದರಿಂದ ಆಸ್ಪತ್ರೆಗೆ ಹೋಗದೆ ಬಾಡಿಗೆ ರೂಂ ನಲ್ಲೇ ಇದ್ದರು ಎಂದು ತಿಳಿದು ಬಂದಿದೆ. ಮದುವೆಯಾಗದ ಕಾರಣ ಕುಟುಂಬದವರಿಗೆ ಹೆದರಿ ಮಗುವನ್ನು ಕಾಡಿಗೆ ಬಿಟ್ಟಿರುವುದಾಗಿ ಆರೋಪಿಗಳು ಹೇಳಿಕೆ ನೀಡಿದ್ದಾರೆ. ಇದಲ್ಲದೆ ಇಬ್ಬರ ಮನೆಗಳಿಗೂ ಪೊಲೀಸರು ಬರುವವರೆಗೂ ಈ ವಿಚಾರದ ಬಗ್ಗೆ ಯಾವುದೇ ಸುಳಿವು ಲಭಿಸಿಲ್ಲ ಎನ್ನಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article