ಪೇಜಾವರ ಮಠದ ವತಿಯಿಂದ ಡಾ. ಎಂ.ಎನ್. ರಾಜೇಂದ್ರಕುಮಾರ್ ಅವರಿಗೆ ಅಭಿನಂದನೆ

ಪೇಜಾವರ ಮಠದ ವತಿಯಿಂದ ಡಾ. ಎಂ.ಎನ್. ರಾಜೇಂದ್ರಕುಮಾರ್ ಅವರಿಗೆ ಅಭಿನಂದನೆ


ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪದವಿಯಿಂದ ಪುರಸ್ಕೃತರಾದ ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ, ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಉಡುಪಿ ಪೇಜಾವರ ಮಠದ ವತಿಯಿಂದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಭಾನುವಾರ ಆಶೀರ್ವಚಿಸಿ, ಅಭಿನಂದಿಸಿದರು.

ಶ್ರೀ ಪೇಜಾವರ ಅಧೋಕ್ಷಜ ಮಠ ಉಡುಪಿ, ಅಖಿಲ ಭಾರತ ಮಾಧ್ವ ಮಹಾಮಂಡಲ (ರಿ.) ಮತ್ತು ಪೂರ್ಣಪ್ರಜ್ಞ ವಿದ್ಯಾಪೀಠ ಪ್ರತಿಷ್ಠಾನ (ರಿ), ಬೆಂಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ, ಮಹಾಗಣಪತಿ ದೇವಸ್ಥಾನದಲ್ಲಿ ನಡೆಯುತ್ತಿರುವ ಭಕ್ತಿ ಸಿದ್ಧಾಂತೋತ್ಸವ-ರಾಮೋತ್ಸವ ಧಾರ್ಮಿಕ ಸಮಾರಂಭದಲ್ಲಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಅಭಿನಂದಿಸಿದರು.

ಎಸ್‌ಸಿಡಿಸಿಸಿ ಬ್ಯಾಂಕಿನ ನಿರ್ದೇಶಕ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article