ನೇತ್ರಾವತಿ ಸೇತುವೆ ದುರಸ್ತಿ: ಸಂಚಾರ ನಿರ್ಬಂಧ

ನೇತ್ರಾವತಿ ಸೇತುವೆ ದುರಸ್ತಿ: ಸಂಚಾರ ನಿರ್ಬಂಧ

ಮಂಗಳೂರು: ನಗರದಿಂದ ಕೇರಳ ರಾಜ್ಯಕ್ಕೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 66ರ ಹಳೆಯ ನೇತ್ರಾವತಿ ಸೇತುವೆಯಲ್ಲಿ (ತಲಪಾಡಿ-ಮಂಗಳೂರು ನಗರಕ್ಕೆ ಬರುವ ರಸ್ತೆಯಲ್ಲಿ) ರಾ.ಹೆ. ಪ್ರಾಧಿಕಾರದಿಂದ ಎ.1ರಿಂದ 30ರ ವರೆಗೆ 30 ದಿನಗಳ ಕಾಲ ದುರಸ್ತಿ ಕಾಮಗಾರಿ ನಡೆಯಲಿದೆ. ಹಾಗಾಗಿ ಸೇತುವೆಯಲ್ಲಿ ಸಂಚಾರ ನಿರ್ಬಂಧ ಮಾಡಲಾಗಿದ್ದು, ವಾಹನಗಳು ಪರ್ಯಾಯ ರಸ್ತೆಯಲ್ಲಿ ಸಂಚರಿಸುವಂತೆ ತಿಳಿಸಲಾಗಿದೆ.

ಹೊಸ ಸೇತುವೆಯಲ್ಲಿ (ಮಂಗಳೂರು ನಗರದಿಂದ ತಲಪಾಡಿ ಕಡೆಗೆ ಹೋಗುವ) ವಾಹನಗಳ ಸಂಚಾರಕ್ಕಾಗಿ ದ್ವಿಮುಖ ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದೆ. ಇದರಿಂದಾಗಿ ಪಂಪ್‌ವೆಲ್‌ನಿಂದ ತೊಕ್ಕೊಟ್ಟು ವರೆಗೆ ಹೆದ್ದಾರಿಯ ರಸ್ತೆಯಲ್ಲಿ ವಾಹನ ಸಂಚಾರದಲ್ಲಿ ದಟ್ಟನೆ ಉಂಟಾಗುವ ಸಾಧ್ಯತೆಯಿದೆ. ಆದ್ದರಿಂದ ನೇತ್ರಾವತಿ ಸೇತುವೆಯ ಮೂಲಕ ಸಂಚರಿಸುವ ಎಲ್ಲ ವಾಹನಗಳ ಚಾಲಕರು/ ಸವಾರರು ಮತ್ತು ಸಾರ್ವಜನಿಕರು ಎಚ್ಚರಿಕೆಯಿಂದ ಸಾಗಬೇಕು. ಬೆಳಗ್ಗೆ ಮತ್ತು ಸಂಜೆ ವೇಳೆ ವಾಹನ ಸಂಚಾರದಲ್ಲಿ ಬದಲಾವಣೆ ಮಾಡಿಕೊಳ್ಳುವುದು ಸೂಕ್ತ ಎಂದು ಪೊಲೀಸರು ತಿಳಿಸಿದ್ದಾರೆ.

ಇತರೆ ಮಾರ್ಗಗಳು..

ಮುಡಿಪು-ಕೊಣಾಜೆ-ದೇರಳಕಟ್ಟೆ ಕಡೆಯಿಂದ ಮಂಗಳೂರು ನಗರ ಕಡೆಗೆ ಸಂಚರಿಸುವ ಸ್ಥಳೀಯ ಲಘು ವಾಹನಗಳು/ದ್ವಿ-ಚಕ್ರ ವಾಹನಗಳು ಕೊಣಾಜೆ- ಹರೇಕಳ (ಬ್ರಿಡ್ಜ್) ಅಡ್ಯಾರ್ ಮುಖಾಂತರ ಮಂಗಳೂರು ಕಡೆಗೆ ಸಂಚರಿಸಬಹುದು.

ಮಂಗಳೂರು ಕಡೆಯಿಂದ ಕೊಣಾಜೆ-ಮುಡಿಪು-ದೇರಳಕಟ್ಟೆ ಕಡೆಗೆ ಸಂಚರಿಸುವ ಸ್ಥಳೀಯ ದ್ವಿ-ಚಕ್ರ/ ಲಘು ವಾಹನಗಳು ಅಡ್ಯಾರ್-ಹರೇಕಳ(ಬ್ರಿಡ್ಜ್) ಮುಖಾಂತರ ಸಂಚರಿಸುವುದು ಸೂಕ್ತ.

ತಲಪಾಡಿ, ಉಳ್ಳಾಲ ಕಡೆಯಿಂದ ಬೆಂಗಳೂರು-ಉಪ್ಪಿನಂಗಡಿ-ಪುತ್ತೂರು-ಸುಳ್ಯ ಕಡೆಗೆ ಸಂಚರಿಸುವ ವಾಹನಗಳು ತೊಕ್ಕೊಟ್ಟಿನಿಂದ ಬಲಕ್ಕೆ ತಿರುಗಿ ಮುಡಿಪು-ಬೋಳಿಯಾರ್- ಮೆಲ್ಕಾರ್ ಮೂಲಕ ಸಂಚರಿಸಬಹುದು.

ಬಿ.ಸಿ. ರೋಡ್ ಕಡೆಯಿಂದ ತಲಪಾಡಿ ಮತ್ತು ಕೇರಳ ಕಡೆಗೆ ಸಂಚರಿಸುವ ವಾಹನಗಳು ಪಂಪ್‌ವೆಲ್ ಮೂಲಕ ಸಾಗುವ ಬದಲು ಮೆಲ್ಕಾರ್-ಮುಡಿಪು-ತೊಕ್ಕೊಟ್ಟು ಮುಖಾಂತರ ಸಂಚರಿಸಬಹುದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article