ಅಗತ್ಯ ವಸ್ತುಗಳ ಬೆಲೆ ಏರಿಕೆ ರಾಜ್ಯ, ಕೇಂದ್ರ ಸರಕಾರಗಳ ವಿರುದ್ಧ ಪ್ರತಿಭಟನೆ

ಅಗತ್ಯ ವಸ್ತುಗಳ ಬೆಲೆ ಏರಿಕೆ ರಾಜ್ಯ, ಕೇಂದ್ರ ಸರಕಾರಗಳ ವಿರುದ್ಧ ಪ್ರತಿಭಟನೆ


ಮಂಗಳೂರು: ಪೆಟ್ರೋಲ್ ಡೀಸೆಲ್, ಹಾಲು, ಆಹಾರ ಧಾನ್ಯ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಗಳು ಏರಿಕೆ ವಿರುದ್ಧ ಸಿಪಿಐಮ್ ಪಕ್ಷದ ನಗರ ದಕ್ಷಿಣ ಮತ್ತು ಉತ್ತರ ಸಮಿತಿಗಳ ನೇತೃತ್ವದಲ್ಲಿ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಯಿತು.

ಸಿಪಿಐಎಂ ಜಿಲ್ಲಾ ಸಮಿತಿ ಸದಸ್ಯ ಬಿ.ಕೆ. ಇಮ್ತಿಯಾಜ್ ಮಾತನಾಡುತ್ತಾ ಕೇಂದ್ರದ ನರೇಂದ್ರ ಮೋದಿ ಸರಕಾರ ಅಚ್ಛೇ ದಿನ ತರುತ್ತೇವೆ ಭ್ರಮೆ ಹುಟ್ಟಿಸಿ ಮೂರನೇ ಅವಧಿಗೆ ಅಧಿಕಾರಕ್ಕೇರಿದರೂ ದೇಶದ ಆರ್ಥಿಕತೆಯನ್ನು ಸರಿಪಡಿಸಲು ಹೆಣಗಾಡುತ್ತಿದೆ. ಜನತೆಯ ಮೇಲೆ ಬೆಲೆ ಏರಿಕೆ ಮತ್ತು ತೆರಿಗೆಯ ಹೊರೆಯನ್ನು ಹಾಕಿದೆ ಇದರ ಪರಿಣಾಮ ದೇಶದಲ್ಲಿ ಹಸಿವು ಮತ್ತು ನಿರುದ್ಯೋಗದ ಸಮಸ್ಯೆ ಗಂಭೀರ ಹಂತವನ್ನು ತಲುಪಿದೆ. ಉಪ್ಪಿನಿಂದ ಕರ್ಪೂರದವರೆಗೆ ಎಲ್ಲಾ ರೀತಿಯ ಬೆಲೆ ಏರಿಕೆಗಳು ಜನರ ಹಿಂಡಿ ಹಿಪ್ಪೆ ಮಾಡಿದಂತಾಗಿದೆ.

ಇನ್ನೊಂದೆಡೆ ರಾಜ್ಯದ ಕಾಂಗ್ರೆಸ್ ಸರಕಾರ  ಒಂದು ಕೈಯ್ಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಕೊಟ್ಟು ಮತ್ತೊಂದು ಕೈಯಿಂದ ಕಿತ್ತು ಕೊಳ್ಳುತ್ತಿದೆ. ಹಾಲು, ತರಕಾರಿ ಬೆಲೆಗಳು ಗಗನಕ್ಕೇರಿದೆ ಮುದ್ರಾಂಕ ಶುಲ್ಕಗಳು ವಿಪರೀತ ಏರಿಕೆ ಮಾಡಿದೆ. 

ಬೆಲೆ ಏರಿಕೆಗೆ ಕಾರಣರಾಗಿರುವ ಬಿಜೆಪಿ, ಕಾಂಗ್ರೆಸ್ ಸರಕಾರಗಳು ಪರಸ್ಪರ ರಾಜಕೀಯ ಕೆಸೆರೆರೆಚಾಟದಲ್ಲಿ ತೊಡಗಿದೆಯೇ ಹೊರತು ಏರಿದ ಬೆಲೆ ಇಳಿಕೆ ಮಾಡಲು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆಪಾದಿಸಿದರು.

ಮಾಜಿ ಕಾಪೋರೇಟರ್ ದಯಾನಂದ ಶೆಟ್ಟಿ, ಸಂತೋಷ್ ಬಜಾಲ್, ಶ್ರೀನಾಥ್ ಕುಲಾಲ್ ಮಾತನಾಡಿದರು.

ಸಿಪಿಐಎಂ ದಕ್ಷಿಣ ಸಮಿತಿ ಕಾರ್ಯದರ್ಶಿ ಯೋಗೀಶ್ ಜಪ್ಪಿನಮೊಗರು ಪ್ರಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರೆ, ಉತ್ತರ ಸಮಿತಿ ಕಾರ್ಯದರ್ಶಿ ಪ್ರಮೀಳಾ ಕೆ ವಂದಿಸಿದರು.

ಪ್ರತಿಭಟನೆಯಲ್ಲಿ ಡಾ ಕೃಷ್ಣಪ್ಪ ಕೊಂಚಾಡಿ,ರವಿಚಂದ್ರ ಕೊಂಚಾಡಿ, ದಿನೇಶ್ ಜಪ್ಪಿನಮೊಗರು, ಉದಯಚಂದ್ರ ರೈ, ಭಾರತಿ ಬೋಳಾರ, ಪಿ ಜಿ ರಫೀಕ್, ಲೋಕೇಶ್ ಎಂ, ದೀಪಕ್ ಬಜಾಲ್, ಜಯಲಕ್ಷ್ಮಿ ಜಪ್ಪಿನಮೊಗರು, ನಾಗೇಶ್ ಬೋಳಾರ, ಜಗದೀಶ್ ಬಜಾಲ್, ಅಶೋಕ್ ಶ್ರೀಯಾನ್, ಶಶಿಧರ ಶಕ್ತಿನಗರ, ಬಿಕೆ ಮಸೂದ್, ಆಶಾ ಬೋಳೂರು, ತಯ್ಯುಬ್ ಬೆಂಗ್ರೆ ಮುಂತಾದವರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article