
ಶ್ರೀ ಮಹಾವೀರ ಕಾಲೇಜಿನಲ್ಲಿ ಮಹಾವೀರ ಜಯಂತಿ
Thursday, April 10, 2025
ಮೂಡುಬಿದಿರೆ: ಶ್ರೀ ಮಹಾವೀರ ಕಾಲೇಜಿನಲ್ಲಿ ಭಗವಾನ್ ಮಹಾವೀರರ ಜಯಂತಿಯನ್ನು ಗುರುವಾರ ಬೆಳಿಗ್ಗೆ ಆಚರಿಸಲಾಯಿತು. ಮೂಡುಬಿದಿರೆ ಶ್ರೀ ಜೈನ ಮಠದ ಮುಖ್ಯ ಪುರೋಹಿತರಾದ ಪಾರ್ಶ್ವನಾಥ ಇಂದ್ರ ಅವರು ಕಾಲೇಜಿನ ಪ್ರವೇಶದ್ವಾರದಲ್ಲಿರುವ ಶ್ರೀ ಮಹಾವೀರ ಸ್ವಾಮಿಯ ಅಮೃತ ಶಿಲೆಯ ಮೂರ್ತಿಗೆ ಹಾಲು, ಶ್ರೀಗಂಧ ದ್ರವ್ಯಗಳಿಂದ ಅಭಿಷೇಕ ಮಾಡಿ ಪೂಜೆಸಲ್ಲಿಸಿ ಪ್ರಾರ್ಥನೆಗೈದರು.
ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಕೆ.ಅಭಯಚಂದ್ರ ಜೈನ್, ಉಪಾಧ್ಯಕ್ಷ ಸಂಪತ್ ಸಾಮ್ರಾಜ್ಯ, ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ, ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲ ಪ್ರೊ. ಎಂ. ರಮೇಶ್ ಭಟ್, ಎಸ್ಎನ್ಎಮ್.ಪಾಲಿಟೆಕ್ನಿಕ್ ಪ್ರಾಂಶುಪಾಲೆ ನೊರೋನ್ಹಾ ತರೀನಾ ರೀಟಾ, ಎಂ.ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಪ್ರಾಂಶುಪಾಲ ಧನಂಜಯ ಶೆಟ್ಟಿ, ಜೆ.ಜೆ. ಪಿಂಟೊ ಹಾಗೂ ಕಾಲೇಜಿನ ಅಧ್ಯಾಪಕ ಅಧ್ಯಾಪಕೇತರವರ್ಗದವರು ಉಪಸ್ಥಿತರಿದ್ದರು.