
ಗ್ಯಾರಂಟಿ ಸಂಭ್ರಮೋತ್ಸವ: ಕರಪತ್ರ ಅನಾವರಣ
Monday, April 28, 2025
ಮೂಡುಬಿದಿರೆ: ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರಕ್ಕೆ 2 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮೂಡುಬಿದಿರೆ ತಾಲೂಕು ಪಂಚ ಗ್ಯಾರಂಟಿ ಸಮಿತಿಯು ಸರಕಾರದ ಸಾಧನೆಗಳನ್ನು ತಾಲೂಕಿನ ಪ್ರತಿಯೊಂದು ಮನೆಗೆ ತಲುಪಿಸಬೇಕೆಂಬ ಉದ್ದೇಶ ವನ್ನು ಇಟ್ಟು ಕೊಂಡು ಮನೆ ಬಾಗಿಲಿಗೆ ಗ್ಯಾರಂಟಿ ಸಂಭ್ರಮೋತ್ಸವ ಎಂಬ ವಿನೂತನ ಕಾರ್ಯಕ್ರಮವನ್ನು ಆಯೋಜಿಸಿದ್ದು ಇದರ ಕರಪತ್ರವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಅವರು ಅನಾವರಣಗೊಳಿಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್. ಪ್ರವೀಣ್ ಕುಮಾರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಪ್ರಿಯ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ಅನಿಷ್ ಡಿಸೋಜ, ನಗರ ಅಧ್ಯಕ್ಷ ಜೊಸ್ಸಿ ಮಿನೇಜಸ್, ಯೋಜನಾ ಪ್ರಾಧಿಕಾರ ಅಧ್ಯಕ್ಷ ಹರ್ಷ ವರ್ಧನ ಪಡಿವಾಳ, ಕೆಪಿಸಿಸಿ ಸದಸ್ಯ ಚಂದ್ರಹಾಸ್ ಸನಿಲ್, ಪುರಸಭೆ ಸದಸ್ಯ ಪುರಂದರ ದೇವಾಡಿಗ ಉಪಸ್ಥಿತರಿದ್ದರು.