
ಸ್ಕೂಟಿಗೆ ಟಿಪ್ಪರ್ ಢಿಕ್ಕಿ: ಓರ್ವ ಮೃತ್ಯು, ಸಹಸವಾರ ಗಂಭೀರ
Friday, April 4, 2025
ಉಡುಪಿ: ಸ್ಕೂಟಿಗೆ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟು, ಸಹಸವಾರ ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ಸಂಜೆ ಬ್ರಹ್ಮಾವರ ಸಮೀಪದ ಪೇತ್ರಿ ಜಂಕ್ಷನ್ನಲ್ಲಿ ನಡೆದಿದೆ.
ಅಪಘಾತದಲ್ಲಿ ಸಾಸ್ತಾನ ನಿವಾಸಿ ದೀಕ್ಷಿತ್ (24) ಸ್ಥಳದಲ್ಲೇ ಮೃತಪಟ್ಟ ದುರ್ದೈವಿ. ಸಹಸವಾರ ಅಭಿಷೇಕ್ ಸಾಸ್ತಾನ ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸ್ಕೂಟಿ ಸವಾರರು ಹೆಬ್ರಿಯಿಂದ ಬ್ರಹ್ಮಾವರ ಕಡೆ ಬರುತ್ತಿರುವಾಗ ಪೇತ್ರಿ ಕುಕ್ಕೆಹಳ್ಳಿ ಕಡೆಗೆ ಹೋಗುತ್ತಿದ್ದ ಟಿಪ್ಪರ್ ಲಾರಿ ಢಿಕ್ಕಿ ಹೊಡೆದಿದೆ. ಬ್ರಹ್ಮಾವರ ಠಾಣೆಯಲ್ಲಿ ಕೇಸು ದಾಖಲಾಗಿದೆ.