ಏ.13 ರಿಂದ 23 ರವರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿಷು ಜಾತ್ರಾ ಮಹೋತ್ಸವ

ಏ.13 ರಿಂದ 23 ರವರೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿಷು ಜಾತ್ರಾ ಮಹೋತ್ಸವ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥಸ್ವಾಮಿ ಸನ್ನಿಧಿಯಲ್ಲಿ ಪ್ರತಿ ವರ್ಷ ನಡೆಯುವ ವಿಷು ಜಾತ್ರಾ ಮಹೋತ್ಸವವು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಏ.13 ರಿಂದ 23 ರವರೆಗೆ ವಿವಿಧ ಧಾರ್ಮಿಕ ಹಾಗೂ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. 

ಏ.13 ವಿಶ್ವಾವಸು ಸಂವತ್ಸರದ ಮೇಷ ಸಂಕ್ರಮಣದಂದು ಧ್ವಜಾರೋಹಣದಿಂದ ಮೊದಲ್ಗೊಂಡು ಏ.23 ರಂದು ಧ್ವಜಾವರೋಹಣದವರೆಗೆ ನಡೆಯಲಿದೆ.

ಏ.14 ರಂದು ಸೌರ ಯುಗಾದಿ(ವಿಷು), ಧರ್ಮನೇಮ, ಏ.15 ರಂದು ಅಣ್ಣಪ್ಪ ದೈವಗಳ ನೇಮ, ಏ.16 ರಂದು ಉತ್ಸವ, ಏ.17 ರಂದು ಬೈಗಿನ ಬಲಿ ಹೊರಡುವುದು, ಹೊಸಕಟ್ಟೆ ಉತ್ಸವ, ಏ.18 ರಂದು ಕಂಚಿಮಾರುಕಟ್ಟೆ ಉತ್ಸವ, ಏ.19 ರಂದು ಲಲಿತೋದ್ಯಾನವನ ಕಟ್ಟೆ ಉತ್ಸವ, ಏ.20 ರಂದು ಕೆರೆಕಟ್ಟೆ ಉತ್ಸವ, ಏ.21 ರಂದು ಗೌರಿಮಾರುಕಟ್ಟೆ ಉತ್ಸವ, ಚಂದ್ರಮಂಡಲ ಉತ್ಸವ, ಏ.22 ರಂದು ಶ್ರೀ ಮಂಜುನಾಥಸ್ವಾಮಿಯ ಶ್ರೀ ಮನ್ಮಹಾರಥೋತ್ಸವ, ಏ.23 ರಂದು ನೇತ್ರಾವತಿಯಲ್ಲಿ ಅವಬೃತ ಸ್ನಾನ ಹಾಗೂ ಧ್ವಜಾವರೋಹಣದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನಗೊಳ್ಳಲಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article