ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಹೆಗ್ಗಡೆ ಅವರಿಂದ ಆಶೀರ್ವಾದ

ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಹೆಗ್ಗಡೆ ಅವರಿಂದ ಆಶೀರ್ವಾದ


ಉಜಿರೆ: ಸ್ಥಳೀಯ ಎಸ್.ಡಿ.ಎಂ. ಪದವಿಪೂರ್ವ ಕಾಲೇಜಿನ ಪಿ.ಯು.ಸಿ. ಪಬ್ಲಿಕ್ ಪರೀಕ್ಷೆಯಲ್ಲಿ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳು ಭಾನುವಾರ ಧರ್ಮಸ್ಥಳಕ್ಕೆ ಹೋಗಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ರ‍್ಯಾಂಕ್ ಪಡೆದ ವಿದ್ಯಾರ್ಥಿಗಳನ್ನು ಹೆಗ್ಗಡೆಯವರು ಅಭಿನಂದಿಸಿ ಅವರಿಗೆ ಉಜ್ವಲ ಭವಿಷ್ಯಕ್ಕೆ ಹಾರೈಸಿದರು.

ರ‍್ಯಾಂಕ್ ಪಡೆದ ವಿದ್ಯಾರ್ಥಿಗಳು:

ವಿಜ್ಞಾನ ವಿಭಾಗ:

ತುಷಾರ ಬಿ.ಎಸ್., (5ನೇ ರ‍್ಯಾಂಕ್) ಪಡೆದ ಅಂಕಗಳು: 595, ನೀತಿ ಕೆ.ಪಿ. (9ನೇ ರ‍್ಯಾಂಕ್) ಪಡೆದ ಅಂಕಗಳು: 591, 

ವಾಣಿಜ್ಯ ವಿಭಾಗ:

ಆರ್ಯದಿನೇಶ್ (7ನೇ ರ‍್ಯಾಂಕ್) ಪಡೆದ ಅಂಕಗಳು: 593

ಕಲಾ ವಿಭಾಗ:

ಶ್ರೇಯಾ, ಎಚ್.ಎ. (9ನೆ ರ‍್ಯಾಂಕ್) ಪಡೆದ ಅಂಕಗಳು: 589

ಎಸ್.ಡಿ.ಎಂ. ಪದವಿಪೂರ್ವ ಕಾಲೇಜಿನಿಂದ ಒಟ್ಟು 1099 ವಿದ್ಯಾರ್ಥಿಗಳು ದ್ವಿತೀಯ ಪಿ.ಯು.ಸಿ. ಪರೀಕ್ಷೆಗೆ ಹಾಜರಾಗಿದ್ದು, 1069 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. 97.27 ಫಲಿತಾಂಶ ಬಂದಿರುತ್ತದೆ.

ಉತ್ತಮ ಫಲಿತಾಂಶಕ್ಕಾಗಿ ಹೆಗ್ಗಡೆಯವರು ಸಂಸ್ಥೆಯ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಪ್ರಾಂಶುಪಾಲ ಬಿ. ಪ್ರಮೋದ್ ಕುಮಾರ್, ಉಪನ್ಯಾಸಕರು, ರ‍್ಯಾಂಕ್ ಪಡೆದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article