ಏ.14 ರಂದು ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ

ಏ.14 ರಂದು ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ


ಉಳ್ಳಾಲ: ಸಂವಿಧಾನ ಶಿಲ್ಫಿ ಡಾ. ಬಿ.ಆರ್. ಅಂಬೇಡ್ಕರ್ ವಿದ್ಯಾನಿಧಿ ಸಮಿತಿ ಕೊಣಾಜೆ, ಉಳ್ಳಾಲ ಇದರ ವತಿಯಿಂದ ಪಂಚಮ ವರ್ಷದ ಆಚರಣೆ ಡಾ. ಬಿ.ಆರ್. ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆಯು ಎ.14ರಂದು ಬೆಳಗ್ಗೆ 9.30 ಅಸೈಗೋಳಿ ಕೇಂದ್ರ ಮೈದಾನದಲ್ಲಿ ನಡೆಯಲಿದೆ ಎಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ವಿದ್ಯಾನಿಧಿ ಸಮಿತಿ ಕೊಣಾಜೆ ಇದರ ಅಧ್ಯಕ್ಷ ಯಾದವ ಅಸೈಗೋಳಿ ತಿಳಿಸಿದರು.

ಅವರು ಗುರುವಾರದಂದು ತೊಕ್ಕೊಟ್ಟು ಉಳ್ಳಾಲ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಉಳ್ಳಾಲ ಹಾಗೂ ಮಂಗಳೂರು ತಾಲೂಕು ವ್ಯಾಪ್ತಿಯಲ್ಲಿ ಬರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನ ಚರಿತ್ರೆಯ ಕುರಿತು ನಡೆದ ಭಾಷಣ ಸ್ಪರ್ಧೆ ಮತ್ತು ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾಗಿರುವ ವಿದ್ಯಾರ್ಥಿಳಿಗೆ ಸನ್ಮಾನ ಹಾಗೂ ವಿವಿಧ ಆಟೋಟ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತ ರಾದ ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಬಹುಮಾನಗಳನ್ನು ವಿತರಿಸಲಾಗುವುದು ಎಂದು ಹೇಳಿದರು.

ಕಾರ್ಯಕ್ರಮ ಉದ್ಘಾಟನೆಯನ್ನು ಸಭಾಧ್ಯಕ್ಷ ಯು.ಟಿ. ಖಾದರ್ ನೆರವೇರಿಸಲಿದ್ದಾರೆ. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಆರ್. ಈಶ್ವರ್ ನಡೆಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರ್ಕಾರಿ ಬಾಲಕರ ಬಾಲ ಮಂದಿರ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕೊಡಗು ಇದರ ಅಧೀಕ್ಷಕ ಶ್ರೀಧರ ಕೆ.ಎನ್. ವಹಿಸಲಿದ್ದಾರೆ.

ಕೊಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ದಾಮೋದರ್, ನ್ಯಾಯವಾದಿಗಳಾದ ಪ್ರತ್ಯೇಶ ರಾವ್, ಕೊಣಾಜೆ ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷ ಶೌಕತ್ ಅಲಿ, ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯ ಅಚ್ಯುತ್ತ ಗಟ್ಟಿ, ಕೊಣಾಜೆ ಪೊಲೀಸ್ ಸಬ್‌ಇನ್‌ಸ್ಪೆಕ್ಟರ್ ನಾಗರಾಜ್ ನಾಯ್ಕ ಮತ್ತಿರರರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

ಜೈ ಭೀಮ್ ಕಲಾ ತಂಡ ವಿಟ್ಲ ಇದರ ಸ್ಥಾಪಾಕಾಧ್ಯಕ್ಷ ಪ್ರಸಾದ್ ಅನಂತಾಡಿ, ಕುಂಟಲಗುರಿ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯಿನಿ ಚಂದ್ರಿಕಾ, ಸಂವಿಧಾನ ಶಿಲ್ಫಿ ಡಾ.ಬಿ.ಆರ್. ಅಂಬೇಡ್ಕರ್ ವಿದ್ಯಾನಿಧಿ ಸಮಿತಿ ಕೊಣಾಜೆ ಇದರ ಸದಸ್ಯರಾದ ರಹಿಮಾನ್ ಕೊಣಾಜೆ, ಸದಾನಂದ ಮಾಡೂರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article