ಜನಾರ್ದನ ಪೂಜಾರಿಯವರ ಮನೆಗೆ ಸಲಿಂ ಅಹ್ಮದ್ ಭೇಟಿ

ಜನಾರ್ದನ ಪೂಜಾರಿಯವರ ಮನೆಗೆ ಸಲಿಂ ಅಹ್ಮದ್ ಭೇಟಿ


ಬಂಟ್ವಾಳ: ಕರ್ನಾಟಕ ವಿಧಾನಪರಿಷತ್‌ನ ಮುಖ್ಯ ಸಚೇತಕರಾದ ಸಲಿಂ ಅಹ್ಮದ್ ಅವರು ಹಿರಿಯ ಕಾಂಗ್ರೆಸ್ ಮುಖಂಡರು, ಮಾಜಿ ಕೇಂದ್ರ ಸಚಿವರಾದ ಬಿ. ಜನಾರ್ದನ ಪೂಜಾರಿಯವರ ಮನೆಗೆ ಭಾನುವಾರ ಭೇಟಿ ನೀಡಿ ಯೋಗ ಕ್ಷೇಮ ವಿಚಾರಿಸಿದರು. 

ಈ ಸಂದರ್ಭದಲ್ಲಿ ಅವರು ಮಾತನಾಡಿ, ಖಾಸಗಿ ಕಾರ್ಯಕ್ರಮದ ಪ್ರಯುಕ್ತ ನಾನು ಜಿಲ್ಲೆಗೆ ಬಂದಿದ್ದು, ಹಿರಿಯರಾದ ಪೂಜಾರಿಯವರನ್ನು ಭೇಟಿ ಮಾಡಬೇಕೆಂದು ನಿಶ್ಚಯಿಸಿದ್ದೆ. ಹಾಗೆಯೇ ಅವರ ಬಂಟ್ವಾಳದಲ್ಲಿರುವ ಮನೆಗೆ ಭೇಟಿ ಅವರ ಆಶೀರ್ವಾದ ಪಡೆದಿದ್ದೇನೆ. ಅದೇ ರೀತಿ ಮಂಗಳೂರಿನಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಯುವ ಕಾಂಗ್ರೆಸ್ ವತಿಯಿಂದ ನಡೆದ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲೂ ಭಾಗವಹಿಸಿದ್ದೇನೆ ಎಂದರು.

ಕಾಂಗ್ರೆಸ್ ಪ್ರಮುಖರಾದ ಕರುಣಾಕರ ಶೆಟ್ಟಿ, ತೇಜಸ್ವಿ ರಾಜ್, ಬೇಬಿ ಕುಂದರ್, ಜಯಂತಿ ಪೂಜಾರಿ, ಚಿತ್ತರಂಜನ್ ಶೆಟ್ಟಿ ಬೊಂಡಾಲ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article