
ಸುಹಾಸ್ ಶೆಟ್ಟಿ ಹತ್ಯೆ: ಶಾಸಕ ರಾಜೇಶ್ ನಾಯ್ಕ್ ಖಂಡನೆ
Friday, May 2, 2025
ಬಂಟ್ವಾಳ: ಮಂಗಳೂರು ಹೊರವಲಯದ ಬಜಪೆಯ ಕಿನ್ನಿಪದವಿನಲ್ಲಿ ಗುರುವಾರ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರ ಹತ್ಯೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ತೀವ್ರವಾಗಿ ಖಂಡಿಸಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಬಳಿಕ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಕೊಲೆ ಸುಲಿಗೆ, ಗಲಭೆಗಳು ನಿರಂತರವಾಗಿ ನಡೆಯುತ್ತಿದ್ದು, ಜಿಲ್ಲೆಯಲ್ಲಿ ಅಶಾಂತಿಯ ವಾತವರಣ ನಿರ್ಮಾಣಗೊಂಡಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಆರೋಪಿಸಿದ್ದಾರೆ.
ಕಾಂಗ್ರೆಸ್ನ ತುಷ್ಠೀಕರಣ ನೀತಿ, ಒಲೈಕೆ ರಾಜಕಾರಣ, ಎಸ್ಡಿಪಿಐ ಕಾರ್ಯಕರ್ತರ ಕೇಸು ವಾಪಾಸ್ ಪಡೆದಿರುವುದು ಕುಮ್ಮುಕ್ಕು ನೀಡಿದಂತಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಮತ್ತೆ ಕೋಮುಗಲಭೆಗಳು ಪ್ರಾರಂಭವಾಗಿದ್ದು, ಕಾಂಗ್ರೆಸ್ ಅಧಿಕಾರದಲ್ಲಿರುವಾಗ ಹಿಂದೂಗಳಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಆರೋಪಿಸಿದ್ದಾರೆ.