ಸ್ಕೂಟರ್‌ಗೆ ಅಂಬಾರಿ ಢಿಕ್ಕಿ: ಸವಸರ ಮೃತ್ಯು

ಸ್ಕೂಟರ್‌ಗೆ ಅಂಬಾರಿ ಢಿಕ್ಕಿ: ಸವಸರ ಮೃತ್ಯು


ಬಂಟ್ವಾಳ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರಿನ ನೆಹರೂನಗರದ ಹೋಟೆಲೊಂದರ ಮುಂಭಾಗ ಕೆಎಸ್‌ಆರ್‌ಟಿಸಿ ಬಸ್ಸೊಂದು ಸ್ಕೂಟರ್‌ಗೆ ಢಿಕ್ಕಿಯಾಗಿ ಸವಾರ ಸಾವನ್ನಪ್ಪಿದ ಘಟನೆ ಭಾನುವಾರ ರಾತ್ರಿ ಸಂಭವಿಸಿದೆ.

ಮೃತರನ್ನು ಮಂಗಳೂರು ನಿವಾಸಿ ಆಲಿಸ್ಟರ್ ಡಿಸೋಜ (24) ಎಂದು ಗುರುತಿಸಲಾಗಿದೆ.

ಪಾಣೆಮಂಗಳೂರು ಗ್ರಾಮದ ನೆಹರೂ ನಗರದ ಹೋಟೆಲ್ ಮುಂಭಾಗದ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ರಸ್ತೆಯ ಎಡಬದಿಯಲ್ಲಿ ಸ್ಕೂಟರ್ ಹೋಗುತ್ತಿದಂತೆ, ಬಿಸಿ ರೋಡ್ ಕಡೆಯಿಂದ ಕಲ್ಲಡ್ಕ ಕಡೆಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಅಂಬಾರಿ ಬಸ್ ಚಾಲಕ ತನ್ನ ಎದುರುಗಡೆಯಿಂದ ಹೋಗುತ್ತಿದ್ದ ಟೆಂಪೂ ಟ್ರಾವೆರ್ಲ್ ವಾಹನವೊಂದನ್ನು ಓವರ್‌ಟೆಕ್ ಮಾಡುವ ಭರದಲ್ಲಿ ರಸ್ತೆಯ ತೀರಾ ಬಲಬದಿಗೆ ಬಂದು ಅಲಿಸ್ಟರ್ ಡಿಸೋಜ್ ಚಲಾಯಿಸುತ್ತಿದ್ದ ಸ್ಕೂಟರ್‌ನ ಮುಂಭಾಗಕ್ಕೆ ಢಿಕ್ಕಿ ಹೊಡೆದಿದ್ದಾನೆ. ಪರಿಣಾಮ ಸ್ಕೂಟರ್ ಸವಾರ ಕಾಂಕ್ರಿಟ್ ರಸ್ತೆಗೆ ಬಿದ್ದು, ತೀವ್ರ ಗಾಯಗೊಂಡಿದ್ದಾರೆ. ಕೂಡಲೇ ಚಿಕಿತ್ಸೆ ಬಗ್ಗೆ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಲ್ಲಿ ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಬಂಟ್ವಾಳ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article