ಸಾಣೂರಿನಲ್ಲಿ ಅಸಮರ್ಪಕ ತಡೆಗೋಡೆ: ಗುಡ್ಡ ಕುಸಿತದ ಭೀತಿ!

ಸಾಣೂರಿನಲ್ಲಿ ಅಸಮರ್ಪಕ ತಡೆಗೋಡೆ: ಗುಡ್ಡ ಕುಸಿತದ ಭೀತಿ!


ಕಾರ್ಕಳ: ಕಾರ್ಕಳ ತಾಲೂಕಿನ ಮುರತಂಗಡಿ ಸಾಣೂರು ಮಧ್ಯೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ-169 ಬದಿಯ ಸಾಣೂರು ಪದ್ಮನಾಭ ನಗರದ ಗುಡ್ಡದ ತುದಿಯಲ್ಲಿರುವ ಹೈಟೆನ್ಶನ್ ಟವರ್ ಬುಡದಲ್ಲಿ ಕಳೆದ ಎರಡು ವರ್ಷಗಳ ಗ್ರಾಮಸ್ಥರ ನಿರಂತರ ಅವಿರತ ಹೋರಾಟದ ನಂತರ ಹೆದ್ದಾರಿ ಇಲಾಖೆ ಕೊನೆಗೂಗುಡ್ಡದ ಎತ್ತರದ ಅರ್ಧ ಭಾಗದವರೆಗೆ ಕಾಂಕ್ರೀಟ್ ತಡೆಗೋಡೆ ನಿರ್ಮಾಣ ಮಾಡಿತ್ತು. ತಡೆಕೋಡೆಯ ಮೇಲ್ಭಾಗಕ್ಕೆ ಕೇವಲ ಮಣ್ಣು ತುಂಬಿಸಿ ಅಸಮರ್ಪಕ ಕಾಮಗಾರಿ ನಡೆಸಿತ್ತು. 

ಗುಡ್ಡದ ಮಣ್ಣು ಕಲ್ಲುಗಳು ರಸ್ತೆಗೆ!

ಇದೀಗ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಗುಡ್ಡದ ಮೇಲಿನ ದೊಡ್ಡ ದೊಡ್ಡ ಕಲ್ಲುಗಳು ಹಾಗೂ ಮಣ್ಣು ಸರ್ವಿಸ್ ರಸ್ತೆಗೆ ಬೀಳುತ್ತಿದ್ದು, ವಾಹನ ಗಳಿಗೆ ಮತ್ತು ಸರ್ವಿಸ್ ರಸ್ತೆಯಲ್ಲಿ ನಡೆದಾಡುವ ಗ್ರಾಮಸ್ಥರಿಗೆ ಆತಂಕಕಾರಿಯಾಗಿ ಪರಿಣಮಿಸಿದೆ.

ಮುಂಗಾರು ಪೂರ್ವದಲ್ಲಿ ಸುರಿಯುತ್ತಿರುವ ಒಂದೆರಡು ದಿನದ ಮಳೆಗೆ ಈ ಪರಿಸ್ಥಿತಿಯಾದರೆ, ಮುಂದೆ ಜೂನ್‌ನಿಂದ ಪ್ರಾರಂಭವಾಗುವ ಮುಂಗಾರು ಮಳೆ ನಿರಂತರವಾಗಿ ಸುರಿಯುವಾಗ ಖಂಡಿತವಾಗಿಯೂ ಗುಡ್ಡದ ಮಣ್ಣು ಜರಿದು ರಸ್ತೆಗೆ ಬಿದ್ದು ಇನ್ನಷ್ಟು ಅಪಾಯವಾಗುವ ಸಂಭವವಿದೆ. ಈಗಾಗಲೇ ಕುಸಿಯುವ ಬೀತಿಯಿಂದ ಜನರು ಈ ರಸ್ತೆಯಲ್ಲಿ ಒಡಾಡುವುದಕ್ಕೆ ಹಿಂಜರಿಯುತ್ತಿದ್ದಾರೆ. ಈ ಬಗ್ಗೆ ಸಂಬಂದಪಟ್ಟ ಇಲಾಖಾ ಅಧಿಕಾರಿಗಳು ಕಾರ್ಯಪ್ರವರ್ತರಾಗದಿದ್ದಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ.

ಜಿಲ್ಲಾಧಿಕಾರಿಯವರು ಶಾಸಕರು ಸಂಸದರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಮ್ಮುಖದಲ್ಲಿ ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ನಿರ್ದೇಶನ ನೀಡಿ ಮಾಡಿಸಿದ ಈ ತಡೆಗೋಡೆ ನಿರ್ಮಾಣ ಕಾರ್ಯ ಗುಡ್ಡದ ಎತ್ತರ ಮತ್ತು ಉದ್ದಕ್ಕೆ ಅರ್ಧ ಭಾಗಕಷ್ಟೇ ಮಾಡಿದ್ದು, ಉಳಿದರ್ಧ ಭಾಗದ ಮಣ್ಣು ನಿರಂತರ ಜರಿದು ಬೀಳುವುದು ಖಂಡಿತ.

ತಡೆಗೋಡೆ ವಿಸ್ತರಣೆ ಆಗಿಲ್ಲ!

ಸಾಣೂರು ಯುವಕಮಂಡಲದ ಆಟದ ಮೈದಾನದ ಅಂಚಿಗೆ ತಡೆಗೋಡೆಯನ್ನು ವಿಸ್ತರಣೆ ಮಾಡುವಂತೆ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿಯವರ ಮೂಲಕ ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಪ್ರಸ್ತಾವನೆಯನ್ನು ಕೂಡ ಕಳುಹಿಸಲಾಗಿದೆ. ಆದರೂ ಈವರೆಗೆ ತಡೆಗೂಡೆ ವಿಸ್ತರಣಾ ಕಾರ್ಯಕ್ಕೆ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ದೊರೆತಿಲ್ಲ. ಜನಸಾಮಾನ್ಯರಿಗೆ ಅರ್ಥವಾಗುವ ವಿಚಾರ ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಹೊಳೆಯದೆ ಇರುವುದು ವಿಪರ್ಯಾಸ.

ಜನಾಕ್ರೋಶವನ್ನು ಎದುರಿಸಲು ಸಿದ್ಧರಾಗಿ!:

ಕೇವಲ ಜನರ ಒತ್ತಡಕ್ಕೆ ಮಣಿದು ಅರೆಬರೆ ತಡೆಗೋಡೆ ನಿರ್ಮಾಣ ಕಾರ್ಯ ನಡೆಸಿದ ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಪರಿಸರದ ಜನತೆ ಹಿಡಿ ಶಾಪ ಹಾಕುತ್ತಿದ್ದು, ಕೂಡಲೇ ಗುಡ್ಡದ ಮಣ್ಣು ರಸ್ತೆಗೆ ಬೀಳದಂತೆ ಸುರಕ್ಷಿತವಾಗಿ ತಡೆಗೋಡೆ ಕಾಮಗಾರಿಯನ್ನು ಸಂಪೂರ್ಣಗೊಳಿಸದಿದ್ದರೆ ಮತ್ತೊಮ್ಮೆ ರಾಷ್ಟ್ರೀಯ ಹೆದ್ದಾರಿ ಇಲಾಖೆ ಸಾಣೂರು ಗ್ರಾಮಸ್ಥರ ಭಾರಿ ಜನಾಕ್ರೋಶಕ್ಕೆ ತುತ್ತಾಗಬೇಕಾಗಿದೀತೆಂದು ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿಯ ಪ್ರಮುಖರಾದ ಸಾಣೂರು ನರಸಿಂಹ ಕಾಮತ್ ಅವರು ಎಚ್ಚರಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article