ಚಲಿಸುತ್ತಿದ್ದ ಸಿಎನ್‌ಜಿ ಕಾರು ಬೆಂಕಿಗಾಹುತಿ

ಚಲಿಸುತ್ತಿದ್ದ ಸಿಎನ್‌ಜಿ ಕಾರು ಬೆಂಕಿಗಾಹುತಿ


ಕಾಸರಗೋಡು: ಚಲಿಸುತ್ತಿದ್ದ ಕಾರು ಅಗ್ನಿಗಾಹುತಿಯಾದ ಘಟನೆ ಶುಕ್ರವಾರ ಬೆಳಿಗ್ಗೆ ಚೆರ್ಕಳ ಸಮೀಪದ ಬೇವಿಂಜೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಕಾರಲ್ಲಿದ್ದ ಐವರು ಅಪಾಯದಿಂದ ಪಾರಾಗಿದ್ದಾರೆ. ಮುಂಬೈಯಿಂದ ಕಣ್ಣೂರಿನ ಕಣ್ಣಾಪುರಕ್ಕೆ ತೆರಳುತ್ತಿದ್ದ ಕಾರು ಬೇವಿಂಜೆಗೆ ತಲುಪಿದಾಗ ಬೋನೆಟ್‌ನಲ್ಲಿ ಹೊಗೆ ಕಾಣಿಸಿಕೊಂಡಿದ್ದು, ಎಲ್ಲರೂ ಹೊರಬಂದರು. ಕ್ಷಣಾರ್ಧದಲ್ಲಿ ಕಾರು ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟುಕರಕಲಾಗಿದೆ. ಕಾರಿನೊಳಗಿದ್ದ ಹಣ, ನಾಲ್ಕು ಪವನ್ ಚಿನ್ನಾಭರಣ, ಎರಡು ಮೊಬೈಲ್ ಫೋನ್, ಕ್ಯಾಮರಾ ಮೊದಲಾದವು ಹೊತ್ತಿ ಉರಿದಿವೆ. 

ಮುಂಬೈನಲ್ಲಿರುವ ಇಕ್ಬಾಲ್ ಅಹ್ಮದ್ ಎಂಬವರು ಪತ್ನಿ, ಮಕ್ಕಳ ಸಹಿತ ಕಣ್ಣಾಪುರದಲ್ಲಿರುವ ಪತ್ನಿಯ ಸಹೋದರನ ಮನೆಗೆ ಬರುತ್ತಿದ್ದಾಗ ಈ ಘಟನೆ ನಡೆದಿದೆ. ಒಂದೂವರೆ ತಿಂಗಳ ಹಿಂದೆಯಷ್ಟೆ ಸಿ.ಎನ್.ಜಿ ಕಾರು ಖರೀದಿಸಿದ್ದರು

ಕಾಸರಗೋಡಿನಿಂದ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article