ಧಾರಾಕಾರ ಮಳೆ, ಮಧೂರು ದೇವಸ್ಥಾನದ ಪ್ರಾಂಗಣ ಜಲಾವೃತ; ಭಕ್ತರ ಪರದಾಟ

ಧಾರಾಕಾರ ಮಳೆ, ಮಧೂರು ದೇವಸ್ಥಾನದ ಪ್ರಾಂಗಣ ಜಲಾವೃತ; ಭಕ್ತರ ಪರದಾಟ


ಕಾಸರಗೋಡು: ಇಂದು ಕೂಡ ರಾಜ್ಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದ ಪರಿಣಾಮ, ಮಧುವಾಹಿನಿ ಸಹಿತ ಕಾಸರಗೋಡು ಜಿಲ್ಲೆಯ ಹಲವು ನದಿಗಳು ತುಂಬಿ ಹರಿಯುತ್ತಿದೆ.

ಮಧುವಾಹಿನಿ ಹೊಳೆ ತುಂಬಿ ಹರಿಯುತ್ತಿರುವುದರಿಂದ ಇತಿಹಾಸ ಪ್ರಸಿದ್ಧ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಪ್ರಾಂಗಣದೊಳಗೆ ಮಳೆ ನೀರು ತುಂಬಿದೆ.

ಸುಮಾರು 1 ಆಡಿಗೂ ಹೆಚ್ಚು ನೀರು ತುಂಬಿಕೊಂಡಿದೆ. ಪ್ರತಿ ವರ್ಷವೂ ಈ ದೇವಸ್ಥಾನದೊಳಗೆ ನೀರು ಹರಿಯುವುದು ಸಾಮಾನ್ಯ. ಜಿಲ್ಲೆಯಲ್ಲಿ ನಿರಂತರ ಮಳೆಯಿಂದ ತಗ್ಗು ಪ್ರದೇಶದಲ್ಲಿ ನೀರು ತುಂಬಿ ಕೊಂಡಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ತುಂಬಿಕೊಂಡು ಸಾರಿಗೆ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ.

ಇತ್ತೀಚಿಗೆ ಇತಿಹಾಸ ಪ್ರಸಿದ್ಧ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ವಿಜೃಂಭಣೆಯಾಗಿ ಬ್ರಹ್ಮಕಲಶ ನೆರವೇರಿತ್ತು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article