ಮೇ 20 ರಂದು ಮಂಗಳೂರಿನಲ್ಲಿ ಸಿಂದೂರ ವಿಜಯೋತ್ಸವ

ಮೇ 20 ರಂದು ಮಂಗಳೂರಿನಲ್ಲಿ ಸಿಂದೂರ ವಿಜಯೋತ್ಸವ

ಮಂಗಳೂರು: ಪಾಕಿಸ್ತಾನದ ವಿರುದ್ಧ ಭಾರತ ನಡೆಸಿದ ‘ಆಪರೇಷನ್ ಸಿಂದೂರ’ ಸೈನಿಕ ಕಾರ್ಯಾಚರಣೆ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಸಿಂದೂರ ವಿಜಯೋತ್ಸವ ಸಮಿತಿ ಮಂಗಳೂರು ವತಿಯಿಂದ ಮೇ 20 ರಂದು ಅಪರಾಹ್ನ 3 ಗಂಟೆಗೆ ಮಂಗಳೂರು ನಗರದ ಪಿವಿಎಸ್ ವೃತ್ತದಿಂದ ಕರಾವಳಿ ಉತ್ಸವ ಮೈದಾನದ ತನಕ ಮೆರವಣಿಗೆ ಮತ್ತು ಸಂಜೆ 5 ಗಂಟೆಗೆ ಮೈದಾನದಲ್ಲಿ ಸಭಾ ಕಾರ್ಯಕ್ರಮ ಜರುಗಲಿದೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ವಿಜಯೋತ್ಸವ ಸಮಿತಿ ಸಂಚಾಲಕ ಕೇಶವ ನಂದೋಡಿ, ಭಾರತೀಯ ಸೇನಾಪಡೆಗಳು ಮತ್ತು ಯೋಧರ ಧೀರೋದಾತ್ತ ಶೌರ್ಯ-ಪರಾಕ್ರಮವನ್ನು ಅಭಿನಂದಿಸಿ, ಅವರಿಗೆ ಬೆಂಬಲ ನೀಡಿ ಗೌರವಿಸುವ ಉದ್ದೇಶದಿಂದ ಈ ವಿಜಯೋತ್ಸವ ಹಮ್ಮಿಕೊಳ್ಳಲಾಗಿದೆ ಎಂದರು.

ಜಮ್ಮು ಕಾಶ್ಮೀರದ ಪೆಹಲ್ಗಾಮ್‌ನಲ್ಲಿ ಭಯೋತ್ಪಾದಕರು ಅಮಾಯಕ ಜನರ ಮೇಲೆ ಬೀಭತ್ಸಕರ ದಾಳಿ ನಡೆಸಿ ನಮ್ಮ ಸಹೋದರಿಯರ ಸಿಂಧೂರ ಅಳಿಸಿದವರಿಗೆ ಅಪರೇಷನ್ ಸಿಂಧೂರ ಹೆಸರಿನ ಸೈನಿಕ ಕಾರ್ಯಾಚರಣೆಯ ಮೂಲಕ ಭಾರತೀಯ ಸೇನೆ ಸೂಕ್ತ ಶಾಸ್ತಿ ಮಾಡಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ನಡೆಯುವ ವಿಜಯೋತ್ಸವದ ಮೆರವಣಿಗೆ ಮತ್ತು ಸಭಾ ಕಾರ್ಯಕ್ರಮದಲ್ಲಿ ಮಾತೆಯರು ಮುಂಚೂಣಿಯಲ್ಲಿ ಇರುತ್ತಾರೆ. ಕಾರ್ಯಕ್ರಮದಲ್ಲೊ  ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಂಘಟನಾ ಸಮಿತಿಯ ಸಿಎ ಶಾಂತಾರಾಮ ಶೆಟ್ಟಿ, ಗುರುದತ್‌ನಾಯಕ್ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article