ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕುಗಳಿಗೆ 3 ದಿನ ನಿಷೇಧಾಜ್ಞೆ

ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕುಗಳಿಗೆ 3 ದಿನ ನಿಷೇಧಾಜ್ಞೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕು ವ್ಯಾಪ್ತಿಯಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.

ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಇರಾಕೋಡಿ ಎಂಬಲ್ಲಿ ಮರಳು ತರಿಸುವ ನೆಪದಲ್ಲಿ ಯುವಕರಿರ್ವರ ಮೇಲೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳಿಬ್ಬರು ತಲವಾರು ದಾಳಿ ನಡೆಸಿದ್ದು,ಈ ಪೈಕಿ ಗಂಭೀರಗಾಯಗೊಂಡಿದ್ದ ಪಿಕಪ್ ಚಾಲಕ ಮೃತಪಟ್ಟರೆ,ಇನ್ನೋರ್ವ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಈ ಘಟನೆಯ ಹಿನ್ನಲೆಯಲ್ಲಿ ಬಂಟ್ವಾಳ ತಾಲೂಕಿನ ಕೊಳತ್ತಮಜಲು, ಬಡಗಬೆಳ್ಳೂರು ಪರಿಸರದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.
ಕೊಳತ್ತಮಜಲು ನಿವಾಸಿ ಅಬ್ದುಲ್ ರಹಿಮಾನ್ (34) ಎಂಬವರು ಹತ್ಯೆಗೀಡಾಗಿದ್ದು, ಈತನ ಜೊತೆಗಿದ್ದ ಕಲಂದರ್ ಶಾಫಿ ಎಂಬವರಿಗೆ ಕೈಯ ಭಾಗಕ್ಕೆ ತೀವ್ರ ಸ್ವರೂಪದ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೊಲೆಗೀಡಾದ ರಹಿಮಾನ್ ಪಿಕಪ್ ಚಾಲಕನಾಗಿದ್ದು, ಮರಳು ಬೇಕೆಂದು ಬಂದ ಕರೆಯೊಂದರ ಹಿನ್ನಲೆಯಲ್ಲಿ ತನ್ನ ಪಿಕಪ್ ನಲ್ಲಿ ಮರಳು ತುಂಬಿಸಿ ನಿಗದಿತ ಸ್ಥಳವಾದ ಕುರಿಯಾಳ ಸಮೀಪದ ಇರಾಕೋಡಿಗೆ ತಲುಪಿ ವಾಹನದಿಂದ ಮರಳನ್ನು ಇಳಿಸುವ ಸಂದರ್ಭದಲ್ಲಿ, ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಹಿಂಭಾಗದಿಂದ ತಲೆಯ ಭಾಗಕ್ಕೆ ತಲವಾರಿನಿಂದ ದಾಳಿಗೈದು  ಪರಾರಿಯಾಗಿದ್ದಾರೆ.
ಈ ವೇಳೆ ರಹಿಮಾನ್ ಜೊತೆ ಶಾಫಿ ಎಂಬವರು ಜೊತೆಗಿದ್ದು, ಇವರ ಮೇಲೂ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಪರಿಣಾಮ ಆತನ ಕೈಗೆ ತೀವ್ರತರವಾದ ಏಟಾಗಿದೆ.
ಕೊಲೆಗೀಡಾದ ರಹೀಂ ವಿವಾಹಿತರಾಗಿದ್ದು, ಇಬ್ಬರು ಮಕ್ಕಳಿದ್ದಾರೆ.ಇವರು ಕೊಳತ್ತಮಜಲು ಮಸೀದಿಯ ಆಡಳಿತ ಸಮಿತಿ ಕಾರ್ಯದರ್ಶಿಯು ಆಗಿದ್ದಾರೆ.
ಈ ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದು,ಬಿಗುವಿನ ವಾತಾವರಣ ಸೃಷ್ಠಿಯಾಯಿತು.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ನೇತೃತ್ವದಲ್ಲಿ ಪೊಲೀಸರು ಸ್ಥಳಕ್ಕೆ ತೆರಳಿ ಸೂಕ್ತ ಬಂದೋಬಸ್ತು ಏರ್ಪಡಿಸಿದ್ದಾರೆ.
ದೇರಳಕಟ್ಟೆಯ ಆಸ್ಪತ್ರೆಯೊಂದರಲ್ಲಿ ಮೃತರ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದ್ದು
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್‌ ಅವರು ಆಸ್ಪತ್ರೆ ಹಾಗೂ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಆಸ್ಪತ್ರೆಯಲ್ಲಿಯು ನೂರಾರು ಸಂಖ್ಯಾಯಲ್ಲಿ ಜಮಾಯಿಸಿದ್ದಾರೆ.ಇತ್ತ ಗಾಯಾಳು ದಾಖಲಾಗಿರುವ ಆಸ್ಪತ್ರೆಯಲ್ಲು ಜನರು ಜಮಾಯಿಸಿದ್ದು, ಮಂಗಳೂರು ಪೊಲೀಸ್ ಕಮಿಷನರ್ ಅಗರ್ ವಾಲ್ ಅವರು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.
ಘಟನೆಯ ಬಗ್ಗೆ ಸ್ಪಷ್ಟ ಮಾಹಿತಿ ಇನ್ನು‌ ಲಭ್ಯವಾಗಿಲ್ಲ, ಪೊಲೀಸ್ ತಂಡವನ್ನು ರಚಿಸಿ ವಿವಿಧ ಅಯಾಮಗಳಲ್ಲಿ  ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.ದುಷ್ಕರ್ಮಿಗಳಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.

ಸೆಕ್ಷನ್ ಜಾರಿ: ಈ ಘಟನೆಯ ಹಿನ್ನಲೆಯಲ್ಲಿ ಮುಂಜಾಗೃತಾಕ್ರಮವಾಗಿ ಬಂಟ್ವಾಳ ತಾಲೂಕು ಸಹಿತ ಜಿಲ್ಲೆಯ ಐದು ತಾಲೂಕಿನಲ್ಲಿ ಮೇ.30 ರ ಸಂಜೆಯವರೆಗೆ ರವರೆಗೆ ಸೆಕ್ಷನ್ 144 ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದಯಲ್ಲದೆ
ಬಂಟ್ವಾಳದಾದ್ಯಂತ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article