ಅಬ್ದುಲ್ ರಹ್ಮಾನ್ ಕುಟುಂಬಕ್ಕೆ 50 ಲಕ್ಷ ಪರಿಹಾರಕ್ಕೆ ಆಗ್ರಹ

ಅಬ್ದುಲ್ ರಹ್ಮಾನ್ ಕುಟುಂಬಕ್ಕೆ 50 ಲಕ್ಷ ಪರಿಹಾರಕ್ಕೆ ಆಗ್ರಹ

ಮಂಗಳೂರು: ಬಂಟ್ವಾಳ ತಾಲೂಕಿನ ಕೊಳತ್ತಮಜಲು ಎಂಬಲ್ಲಿನ ಕೊಲೆಗೀಡಾದ ಅಬ್ದುಲ್ ರಹ್ಮಾನ್ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ನೀಡಬೇಕು. ಗೃಹ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ಅಬ್ದುಲ್ ರಹಿಮಾನ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿ ಪರಿಹಾರ ಮಂಜೂರು ಮಾಡಬೇಕು ಎಂದು ಎಸ್ಕೆಎಸ್‌ಎಸ್‌ಎಫ್ ಕರ್ನಾಟಕ ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ಅನೀಸ್ ಕೌಸರಿ ಒತ್ತಾಯಿಸಿದರು.

ಜಿಲ್ಲೆಯಲ್ಲಿ ಕಾನೂನಿನ ಭಯವಿಲ್ಲದೆ ಕೋಮು ದ್ವೇಷ ಭಾಷಣ ಮಾಡುವವರನ್ನು ಕೂಡಲೇ ಬಂಽಸಬೇಕು. ಈ ಪ್ರಕರಣದಲ್ಲಿ ಕೊಲೆಗಾರರು ಮತ್ತು ಸಂಚು ರೂಪಿಸಿದವರ ವಿರುದ್ಧ ತತ್ಕ್ಷಣ ಕಠಿಣ ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ಎಸ್ಕೆಎಸ್‌ಎಸ್‌ಎಫ್ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಹೇಳಿದರು. 

ದ.ಕ. ಜಿಲ್ಲೆಯಲ್ಲಿ ಕೋಮು ಪ್ರೇರಿತ ಕೊಲೆಗಳ ಸರಣಿ ಮುಂದುವರಿಯುತ್ತಿದ್ದು, ಇದು ಸಾರ್ವಜನಿಕರನ್ನು ಭಯಭೀತರನ್ನಾಗಿಸಿದೆ. ಜನಸಾಮಾನ್ಯರು, ದಿನಗೂಲಿ ಕೆಲಸದವರ ಬದುಕಿನ ದಾರಿಯನ್ನು ಕಸಿಯುತ್ತಿದೆ. ಕಾನೂನಿನ ಭಯವಿಲ್ಲದೆ ಕೋಮುವಾದಿ ಶಕ್ತಿಗಳು ನಿರಂತರ ದ್ವೇಷ ಭಾಷಣಗಳನ್ನು ನಡೆಸುತ್ತಿರುವುದರ ಪರಿಣಾಮ ಅಬ್ದುಲ್ ರಹಿಮಾನ್ ಹತ್ಯೆ ನಡೆದಿದೆ. ಇದಕ್ಕೆ ರಾಜ್ಯ ಸರಕಾರವೇ ನೇರ ಹೊಣೆ ಎಂದು ಆರೋಪಿಸಿದರು.

ಮೃತ ಅಬ್ದುಲ್ ರಹಿಮಾನ್ ಜಾತ್ಯಾತೀತ ತತ್ವ ಅಳವಡಿಸಿಕೊಂಡು ಬದುಕಿದಂತಹ ವ್ಯಕ್ತಿ. ಜಿಲ್ಲೆಯ 500ರಷ್ಟು ಮೊಹಲ್ಲಾಗಳಿಗೆ ನೇತೃತ್ವ ನೀಡುತ್ತಿರುವ ಎಸ್ಕೆಎಸ್‌ಎಸ್‌ಎಫ್ ಧಾರ್ಮಿಕ ಯುವಜನ ಸಂಘಟನೆಯ ಕಾರ್ಯಕರ್ತ ಮತ್ತು ಸ್ಥಳೀಯ ಮೊಹಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿ. ಮೃತ ಅಬ್ದುಲ್ ರಹಿಮಾನ್ ಸ್ಮರಣಾರ್ಥ ಜಿಲ್ಲೆಯ 100 ಕೇಂದ್ರಗಳಲ್ಲಿ ರಕ್ತದಾನ ಹಾಗೂ 300 ಶಾಖಾ ಕೇಂದ್ರಗಳಲ್ಲಿ ಪ್ರಾರ್ಥನಾ ಸಂಗಮ ಮುಂದಿನ ದಿನಗಳಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಎಸ್ಕೆಎಸ್‌ಎಸ್‌ಎಫ್ ಪ್ರಮುಖರಾದ ರಫೀಖ್ ಅಹ್ಮದ್ ಹುದವಿ ಮುಫ್ತಿ, ಸೆಯ್ಯದ್ ಅಮೀರ್ ತಂಳ್ ಕಿನ್ಯ, ಒ.ಪಿ ಅಶ್ರಫ್, ಖಾಸಿಂ ದಾರಿಮಿ, ರಿಯಾಜ್ ರಹ್ಮಾನಿ, ತಾಜುದ್ದಿನ್ ರಹ್ಮಾನಿ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article