
ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರಗಾಮಿಗಳ ನೆಲೆಯನ್ನು ಧ್ವಂಸಗೈದ ಭಾರತೀಯ ಸೈನಿಕರಿಗೆ ಅಭಿನಂದನೆ ಸಲ್ಲಿಸಿದ ಶಾಸಕ ಕಾಮತ್
Wednesday, May 7, 2025
ಮಂಗಳೂರು: ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರಗಾಮಿಗಳ ನೆಲೆಯನ್ನು ಧ್ವಂಸಗೈದು ಪಹಲ್ಗಾಮ್ ಭಯೋತ್ಪಾದಕ ಕೃತ್ಯಕ್ಕೆ ಸೇಡು ತೀರಿಸಿಕೊಂಡು ಪರಾಕ್ರಮ ಮೆರೆದ ಭಾರತದ ಹೆಮ್ಮೆಯ ಸೈನಿಕರಿಗೆ ಹಾಗೂ ಇಂತಹ ದಿಟ್ಟ ನಿರ್ಧಾರ ತೆಗೆದುಕೊಳ್ಳಲು ಸೇನೆಗೆ ಪರಮಾಧಿಕಾರ ನೀಡಿದ ಶ್ರೀ ನರೇಂದ್ರ ಮೋದಿ ನೇತೃತ್ವದ ಭಾರತ ಸರ್ಕಾರಕ್ಕೆ ಸಮಸ್ತ ಭಾರತೀಯರ ಪರವಾಗಿ ಬಿಗ್ ಹ್ಯಾಟ್ಸಫ್ ಸಹಿತ ಅಭಿನಂದನೆಗಳು ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಹರ್ಷ ವ್ಯಕ್ತಪಡಿಸಿದರು.
ಧರ್ಮಾಧಾರಿತ ಭಯೋತ್ಪಾದಕ ದಾಳಿ ನಡೆಸಿದ ಹೇಡಿ ಉಗ್ರಗಾಮಿಗಳಿಗೆ ಹಾಗೂ ಅವರಿಗೆ ಆಶ್ರಯ-ನೆರವು ನೀಡುವ ಪಾಕಿಸ್ಥಾನಕ್ಕೆ ಇದು ಬಹುಕಾಲ ನೆನಪಿನಲ್ಲಿ ಉಳಿಯುವಂತಹ ಪಾಠವಾಗಿದೆ. ಆಪರೇಷನ್ ಸಿಂಧೂರ ಹೆಸರಿನಲ್ಲಿ ಉಗ್ರಗಾಮಿಗಳ ನೆಲೆಯ ಮೇಲೆಯೇ ಕರಾರುವಕ್ಕಾಗಿ ದಾಳಿ ನಡೆಸಿ ಉಗ್ರಸಂಹಾರ ನಡೆಸಲಾಗಿದ್ದು ಒಬ್ಬೇ ಒಬ್ಬ ಜನಸಾಮಾನ್ಯನಿಗೂ ಯಾವುದೇ ಹಾನಿಯಾಗಿಲ್ಲದ್ದು ಭಾರತದ ಸೇನೆಯ ಶಕ್ತಿ ಹಾಗೂ ಕಾರ್ಯಕ್ಷಮತೆಯಾಗಿದೆ ಎಂದರು.