
ಕೊಲೆ ಆರೋಪಿಗಳನ್ನು ಪತ್ತೆ ಹಚ್ಚಿ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಸ್ಪೀಕರ್ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚನೆ
Friday, May 2, 2025
ಮಂಗಳೂರು: ಮಂಗಳೂರಿನ ಬಜ್ಪೆಯಲ್ಲಿ ನಡೆದ ಕೊಲೆ ಪ್ರಕರಣದ ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಬೇಕಾದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಸೂಚನೆ ನೀಡಿದ್ದಾರೆ.
ಮಂಗಳೂರಿನ ಬಜ್ಪೆ ಕಿನ್ನಿಪದವು ಪ್ರದೇಶದಲ್ಲಿ ಸುಹಾಸ್ ಎಂಬವರ ಕೊಲೆ ನಡೆದಿದ್ದು, ದುಷ್ಕರ್ಮಿಗಳನ್ನು ಶೀಘ್ರ ಪತ್ತೆ ಹಚ್ಚಿ, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಾಡಲು ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಯು.ಟಿ. ಖಾದರ್ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಗೃಹ ಇಲಾಖೆಯೊಂದಿಗೂ ಚರ್ಚೆ ನಡೆಸಿದ ಯು.ಟಿ. ಖಾದರ್ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಹದಗೆಡದಂತೆ ನೋಡಿಕೊಳ್ಳಲು ಬೇಕಾದ ಸೂಕ್ತ ಕ್ರಮ ಕೈಗೊಳ್ಳಲು ಸರಕಾರಕ್ಕೆ ಸೂಚನೆ ನೀಡಿದ್ದಾರೆ.