
ವೆನ್ಲಾಕ್ ಜಿಲ್ಲಾಸ್ಪತೆಯಲ್ಲಿ ಡೇ ಕೇರ್ ಕಿಮೋಥೆರಪಿ ಉದ್ಘಾಟನೆ
Friday, May 23, 2025
ಮಂಗಳೂರು: ರಾಜ್ಯದ 16 ಕಡೆಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಡೇ ಕೇರ್ ಕಿಮೋಥೆರಪಿ ವಿಭಾಗಗಳನ್ನು ವೀಡಿಯೋ ಸಂವಾದದ ಮೂಲಕ ಉದ್ಘಾಟಿಸಿದರು.
ವೆನ್ಲಾಕ್ ಆಸ್ಪತ್ರೆಯಲ್ಲಿ ಸರ್ಕಾರದ ಸೂಚನೆಯ ಮೇರೆಗೆ ಡೇ ಕೇರ್ ಕಿಮೋಥೆರಪಿ ವಿಭಾಗವನ್ನು ಕಸ್ತೂರ್ಬಾ ಮೆಡಿಕಲ್ ಕಾಲೇಜ್ ವತಿಯಿಂದ ಪ್ರಾರಂಭವಾಗಲಿದ್ದು, ಡೇ ಕೇರ್ ಕಿಮೋಥೆರಪಿ ವಿಭಾಗವು ಬೆಳಗ್ಗೆಯಿಂದ ಸಂಜೆಯವರೆಗೆ ಕ್ಯಾನ್ಸರ್ ರೋಗಿಗಳಿಗೆ ಅಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ಉಚಿತ ಚಿಕಿತ್ಸೆಯನ್ನು ಪಡೆಯಬಹುದಾಗಿದೆ.
ಈ ಸಂದರ್ಭದಲ್ಲಿ ಪ್ರಭಾರ ಜಿಲ್ಲಾಧಿಕಾರಿ ಹಾಗೂ ಮುಖ್ಯಕಾರ್ಯನಿವಾಹಣಾಧಿಕಾರಿ ಡಾ. ಆನಂದ್ ಕೆ., ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ, ಜಿಲ್ಲಾ ಶಸ್ತ್ರಚಿಕಿತ್ಸಕರು ಮತ್ತು ಅಧೀಕ್ಷಕರು, ವೆನ್ಲಾಕ್ ಆಸ್ಪತ್ರೆಯ ವೈದ್ಯಾಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಕೆಎಂಸಿ ಅಸೋಸಿಯೇಟ್ನ ಡೀನ್ ಮತ್ತಿತರರು ಉಪಸ್ಥಿತರಿದ್ದರು.