ಕುಡುಪು ಗುಂಪು ಹತ್ಯೆ-ಕಾಂಗ್ರೆಸ್ ಅಮಾಯಕ ಹಿಂದೂ ಯುವಕರನ್ನು ಬಲಿಪಶು ಮಾಡುವ ಷಡ್ಯಂತ್ರ: ಶಾಸಕ ಕಾಮತ್ ಆಕ್ರೋಶ

ಕುಡುಪು ಗುಂಪು ಹತ್ಯೆ-ಕಾಂಗ್ರೆಸ್ ಅಮಾಯಕ ಹಿಂದೂ ಯುವಕರನ್ನು ಬಲಿಪಶು ಮಾಡುವ ಷಡ್ಯಂತ್ರ: ಶಾಸಕ ಕಾಮತ್ ಆಕ್ರೋಶ


ಮಂಗಳೂರು: ಮಂಗಳೂರಿನ ಕುಡುಪು ಬಳಿ ನಡೆದಂತಹ ದುರ್ಘಟನೆಗೆ ಸಂಬಂಧಿಸಿದಂತೆ ಆಡಳಿತ ಪಕ್ಷ ಕಾಂಗ್ರೆಸ್ ರಾಜಕೀಯ ಪ್ರೇರಿತವಾಗಿ ಅಮಾಯಕ ಹಿಂದೂ ಯುವಕರನ್ನು ಬಲಿಪಶು ಮಾಡುವ ಷಡ್ಯಂತ್ರ ನಡೆಸುತ್ತಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಪ್ರಕಟಣೆಯಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳೀಯ ಕಾಂಗ್ರೆಸ್ ಹಾಗೂ ಅದೇ ಮನಸ್ಥಿತಿಯ ಇನ್ನಿತರರು ಪೊಲೀಸ್ ಇಲಾಖೆಯ ಮೇಲೆ ಒತ್ತಡ ಹೇರುವ ಮೂಲಕ ಅಮಾಯಕ ಹಿಂದೂಗಳನ್ನು ಈ ಪ್ರಕರಣದಲ್ಲಿ ಸಿಲುಕಿಸಲು ನೋಡುತ್ತಿದ್ದು, ಪೊಲೀಸ್ ಇಲಾಖೆ ಆಡಳಿತ ಪಕ್ಷದ ಏಜೆಂಟ್ ರೀತಿ ವರ್ತಿಸಬಾರದೆಂದು ಆಗ್ರಹಿಸಿದರು.

ಘಟನೆಗೆ ಸಂಬಂಧಿಸಿ ನ್ಯಾಯಯುತ ತನಿಖೆ ನಡೆಯಲಿ. ಆದರೆ ತನಿಖೆ ನೆಪದಲ್ಲಿ ಹಿಂದೂ ಯುವಕರಿಗೆ ಕಿರುಕುಳ ನೀಡುವುದು, ಬೆದರಿಕೆ ಹಾಕುವುದು ಮಾಡಿದರೆ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಶಾಸಕರು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article