
ನಿಯಂತ್ರಣ ತಪ್ಪಿ ತೋಡಿಗೆ ಬಿದ್ದ ಕಾರು: ಚಾಲಕ ಮೃತ್ಯು
Wednesday, May 28, 2025
ಮಂಗಳೂರು: ಕಾರ್ಯಕ್ರಮವೊಂದರ ಫೋಟೊಗ್ರಾಫಿಗೆಂದು ಕಾರಿನಲ್ಲಿ ತೆರಳುತ್ತಿದ್ದ ಫೋಟೊಗ್ರಾಫರ್ ಕಾರೊಂದು ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕ ಇದ್ದ ತೋಡಿಗೆ ಮಗುಚಿ ಬಿದ್ದ ಘಟನೆ ಇಂದು ಮುಂಜಾನೆ ನಡೆದಿದೆ.
ಅಪಘಾತದಲ್ಲಿ ಕಾರು ಚಾಲಕ, ಫೋಟೊಗ್ರಾಫರ್ ಸೂರ್ಯ ನಾರಾಯಣ (48) ಮೃತಪಟ್ಟಿದ್ದಾರೆ.
ಸೂರ್ಯನಾರಾಯಣ ಅವರು ಪಣಂಬೂರು ಬಳಿಯ ನಂದೀಕೇಶ್ವರ ದೇವಸ್ಥಾನದಲ್ಲಿ ನಡೆಯುವ ಕಾರ್ಯಕ್ರಮದ ಫೋಟೊಗ್ರಾಫಿಗೆಂದು ತನ್ನ ಕಾರಲ್ಲಿ ಹೊರಟಿದ್ದರು. ಮಂಗಳೂರು ಉಡುಪಿ ಮಧ್ಯೆ ರಾಷ್ಟ್ರೀಯ ಹೆದ್ದಾರಿಯ ಮಧ್ಯೆ ಕೋಡಿಕಲ್ ಕ್ರಾಸ್ ಬಳಿ ತನ್ನ ಕಾರಿನ ನಿಯಂತ್ರಣ ತಪ್ಪಿ ಸಮೀಪದ ತೋಡಿಗೆ ಬಿದ್ದು ಅಫಘಾತವಾಗಿದೆ.
ಈ ಸಂಧರ್ಭದಲ್ಲಿ ಸ್ಥಳೀಯರು ಗಾಯಗೊಂಡ ಸೂರ್ಯ ನಾರಾಯಣ ಇವರನ್ನು ಅಸ್ಪತ್ರೆಗೆ ಸಾಗಿಸಿದ್ದಾರೆ. ದಾರಿ ಮಧ್ಯೆ ಅವರು ಮೃತಪಟ್ಟಿದ್ದಾರೆ.