
ಎಸ್ಸಿಡಿಸಿಸಿ ಬ್ಯಾಂಕ್ ವತಿಯಿಂದ ಕೆಎಂಎಫ್ ನಿರ್ದೇಶಕರಿಗೆ ಅಭಿನಂದನೆ
Monday, May 26, 2025
ಮಂಗಳೂರು: ಕರ್ನಾಟಕ ರಾಜ್ಯ ಹಾಲು ಉತ್ಪಾದಕರ ಮಹಾಮಂಡಳ ನಿ., ಬೆಂಗಳೂರು ಇದರ ನಿರ್ದೇಶಕರಾಗಿ ಆಯ್ಕೆಗೊಂಡ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ರವರನ್ನು ಎಸ್ ಸಿಡಿಸಿಸಿ ಬ್ಯಾಂಕ್ನ ಆಡಳಿತ ಮಂಡಳಿ ಸಭೆಯಲ್ಲಿ ಸೋಮವಾರ ಅಭಿನಂದಿಸಲಾಯಿತು.
ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರಕುಮಾರ್ ಅವರು ದೇವಿಪ್ರಸಾದ್ ಶೆಟ್ಟಿ ಬೆಳಪು ಅವರನ್ನು ಬ್ಯಾಂಕಿನ ಆಡಳಿತ ಮಂಡಳಿಯ ಪರವಾಗಿ ಅಭಿನಂದಿಸಿದರು.
ಬ್ಯಾಂಕಿನ ಉಪಾಧ್ಯಕ್ಷg ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರಾದ ಟಿ.ಜಿ. ರಾಜರಾಮ್ ಭಟ್, ಭಾಸ್ಕರ್.ಎಸ್. ಕೋಟ್ಯಾನ್, ಎಂ. ವಾದಿರಾಜ ಶೆಟ್ಟಿ ಶಶಿಕುಮಾರ್ ರೈ ಬಿ., ಎಸ್. ಬಿ. ಜಯರಾಮ್ ರೈ, ಅಶೋಕ್ ಕುಮಾರ್ ಶೆಟ್ಟಿ, ಎಂ.ಮಹೇಶ್ ಹೆಗ್ಡೆ, ಜೈರಾಜ್ ಬಿ. ರೈ, ಸದಾಶಿವ ಉಳ್ಳಾಲ್, ರಾಜೇಶ್ ರಾವ್, ಎಸ್. ಎನ್. ಮನ್ಮಥ, ಕುಶಾಲಪ್ಪ ಗೌಡ, ಸಹಕಾರ ಸಂಘಗಳ ಉಪನಿಬಂಧಕರಾದ ಎಚ್. ಎನ್. ರಮೇಶ್, ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗೋಪಾಲಕೃಷ್ಣ ಭಟ್ ಉಪಸ್ಥಿತರಿದ್ದರು.