ಶರಣ್ ಪಂಪ್ವೆಲ್ ಗೆ ಜೀವ ಬೆದರಿಕೆ: ಎಫ್‌ಐಆರ್ ದಾಖಲು

ಶರಣ್ ಪಂಪ್ವೆಲ್ ಗೆ ಜೀವ ಬೆದರಿಕೆ: ಎಫ್‌ಐಆರ್ ದಾಖಲು

ಮಂಗಳೂರು: ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್‌ಗೆ ಸಾಮಾಜಿಕ ಜಾಲತಾಣದಲ್ಲಿ ಜೀವ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕದ್ರಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಸುದ್ದಿವಾಹಿನಿಯೊಂದರ ಫೇಸ್ ಬುಕ್ ಖಾತೆಯಲ್ಲಿದ್ದ ಸುದ್ದಿಯೊಂದಕ್ಕೆ ‘ಸಾಜೋ ಕಾಂಟ್’ ಎನ್ನುವ ನಕಲಿ ಖಾತೆಯೊಂದರ ಮೂಲಕ ‘ನೆಕ್ಸ್ಟ್ ಟಾರ್ಗೆಟ್ ಶರಣ್ ಪಂಪ್ ವೆಲ್ ಬಿ ರೆಡಿ ಟುಡೈ’ ಎಂದು ಕಮೆಂಟ್ ಹಾಕಲಾಗಿದೆ. ಇದರ ವಿರುದ್ಧ ಶರಣ್ ಪಂಪ್ ವೆಲ್ ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಿಯಾಜ್ ಕಡಂಬು ದೂರು..

ಸಾಮಾಜಿಕ ಜಾಲತಾಣದಲ್ಲಿ ಎಸ್‌ಡಿಪಿಐ ಮುಖಂಡ ರಿಯಾಜ್ ಕಡಂಬುಗೆ ಕೊಲೆ ಬೆದರಿಕೆ ಹಾಕಿದ ಕೆ.ಆರ್. ರಾಕೇಶ್ ಎಂಬಾತನ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಯು ಟ್ಯೂಬ್ ನಲ್ಲಿ ಸುಹಾಸ್ ಶೆಟ್ಟಿ ಕುರಿತ ಸುದ್ದಿ ಪ್ರಸಾರ ಆಗುತ್ತಿದ್ದ ವೇಳೆ ‘ನೆಕ್ಸ್ಟ್ ಈಸ್ ರಿಯಾಜ್ ಕಡಂಬು’

ಹಿಟ್ ಲಿಸ್ಟ್’ ಎಂದು ಪೋಸ್ಟ್ ಕಮೆಂಟ್ ಮಾಡಿದ್ದ. ಈ ಬಗ್ಗೆ ರಿಯಾಜ್ ಕಡಂಬು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article