ಸುಹಾಸ್ ಹತ್ಯೆ-ಎನ್‌ಐಎಗೆ ವಹಿಸಲು ಹಿಂದೇಟು ಯಾಕೆ: ಕ್ಯಾ. ಬ್ರಿಜೇಶ್ ಚೌಟ ಪ್ರಶ್ನೆ

ಸುಹಾಸ್ ಹತ್ಯೆ-ಎನ್‌ಐಎಗೆ ವಹಿಸಲು ಹಿಂದೇಟು ಯಾಕೆ: ಕ್ಯಾ. ಬ್ರಿಜೇಶ್ ಚೌಟ ಪ್ರಶ್ನೆ


ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ಹಸ್ತಾಂತರಿಸಲು ಕಾಂಗ್ರೆಸ್ ಸರ್ಕಾರ ನಿರಾಕರಿಸುತ್ತಿರುವ, ಹಿಂದೇಟು ಹಾಕುತ್ತಿರುವುದು ಆತಂಕಕ್ಕೆ ಹಾಗೂ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಈ ನಿರಾಕರಣೆ ನಡೆಯು ಕೇವಲ ಆಡಳಿತಾತ್ಮಕ ವಿಳಂಬ ಮಾತ್ರವಲ್ಲ. ರಾಜ್ಯ ಸರ್ಕಾರದ ಆಶ್ರಯದಲ್ಲಿ ಬೆಳೆಯುತ್ತಿರುವ (ಇಸ್ಲಾಮಿಕ್) ಮೂಲಭೂತವಾದಿ ಶಕ್ತಿಗಳೊಂದಿಗಿನ ಮೈತ್ರಿಯನ್ನು ರಕ್ಷಿಸಲು ದುರುದ್ದೇಶಪೂರ್ವಕವಾಗಿ ತನಿಖೆ ತಡೆಯುವ ಪ್ರಯತ್ನದ ಪ್ರತಿಬಿಂಬಿವಾಗಿದೆ ಎಂದರು.

ಸುಹಾಸ್ ಶೆಟ್ಟಿ ಪ್ರಕರಣದ ಪಾರದರ್ಶಕ ತನಿಖೆಯಾಗಬೇಕು ಮತ್ತು ಇದನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ಒಪ್ಪಿಸಬೇಕು.  ಇದೊಂದು ಕೊಲೆ ಪ್ರಕರಣ ಮಾತ್ರವಲ್ಲ , ಕರ್ನಾಟಕ ವನ್ನು ವಿಷಪೂರಿತಗೊಳಿಸುವ ,ರಕ್ತ ಸಿಕ್ತಗೊಳಿಸುವ ಪ್ರಕರಣವಾಗಿದೆ. ಜನರ ವಿಶ್ವಾಸ ಗಳಿಸಲು ಈ ಪ್ರಕರಣವನ್ನು ಎನ್ ಐಎಗೆ ಒಪ್ಪಿಸುವುದು ಸೂಕ್ತ ಎಂದರು. 

ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ನ್ಯಾಯೋಚಿತವಾಗಿ ತನಿಖೆಗೆ ಬೆಂಬಲ ನೀಡಬೇಕಾಗಿದ್ದ ಸ್ಫೀಕರ್ ತನಿಖೆಯ ಆರಂಭದ ಮೊದಲೇ ತನಿಖೆಯ ದಾರಿ ತಪ್ಪಿಸುವ ರೀತಿಯಲ್ಲಿ ಹೇಳಿಕೆಯನ್ನು ನೀಡಿದ್ದಾರೆ. ಸುಹಾಸ್ ಕೊಲೆ ಪ್ರಕರಣದ ಓರ್ವ ಆರೋಪಿಯಾಗಿರುವ ವ್ಯಕ್ತಿಯನ್ನು ಸಮರ್ಥಿಸಿಕೊಂಡು ಕ್ಲೀನ್ ಚಿಟ್ ನೀಡಿರುವುದು ಅಚ್ಚರಿ ಮೂಡಿಸಿದೆ. ಸ್ಪೀಕರ್ ಗೆ ಕ್ಲೀನ್ ಚಿಟ್ ನೀಡುವ ಆತುರತೆ ಏನಿತ್ತು ಎಂದು ಪ್ರಶ್ನಿದರು.

ದ.ಕ.ಜಿಲ್ಲೆಯಲ್ಲಿ ನಡೆಯುತ್ತಿರುವ ಪ್ರಕರಣಗಳು ಇಸ್ಲಾಮಿಕ್ ಮೂಲಭೂತವಾದ ಮತ್ತು ರಾಷ್ಟ್ರೀಯತೆಯ ಮಧ್ಯೆ ನಡೆಯುವ ಹೋರಾಟವಾಗಿದೆ. ಇದನ್ನು ಕೇವಲ ಕಮ್ಯುನಲ್ ಹೋರಾಟ, ವೈಯಕ್ತಿಕ ದ್ವೇಷ, ರಿವೇಂಜ್ ಕ್ಲಿಲ್ಲಿಂಗ್ ಎಂಬ ಬಾಲಿಶವಾಗಿ ಮಾತನಾಡಬಾರದು. 

ರಾಷ್ಡ್ರವಿರೋಧಿ, ಇಸ್ಲಾಮಿಕ್ ಮೂಲಭೂತವಾದ, ಜಿಹಾದಿ ಎಲಿಮೆಂಟ್ ಗಳ ಪಾತ್ರವನ್ನು ಮರೆಮಾಚುವ ಪ್ರಯತ್ನ ವನ್ನು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಮಾಡುತ್ತಿದೆ ಎಂದು ಆರೋಪಿಸಿದರು. 

ರಾಜ್ಯದಲ್ಲಿ ಪಿಎಫ್ ಐ ಕಾರ್ಯಕರ್ತರಿಗೆ ಲಾಜೆಸ್ಟಿಕ್ ಮತ್ತು ಹಣದ ವ್ಯವಸ್ಥೆ ಆಗುತ್ತಿದೆ ಎಂದು ಇಂಡಿಯಾ ಟುಡೇ ಪತ್ರಿಕೆಯಲ್ಲಿ ಪ್ರಕಟವಾಗಿತ್ತು ಎಂದು ಅವರು ಹೇಳಿದರು. ಪಿಎಫ್‌ಐಗೆ ಚಟುವಟಿಕೆಗಳಿಗೆ ಕರ್ನಾಟಕ ಸುರಕ್ಷಿತ ತಾಣವಾಗಿ ರಾಜ್ಯ ಸರಕಾರ ಮಾಡುತ್ತಿದೆ. ಕಾಂಗ್ರೆಸ್ ಸರಕಾರದ ಮಾದರಿ ಸುಹಾಸ್ ಶೆಟ್ಟಿ ಪ್ರಕರಣದಲ್ಲಿ ಪ್ರತಿಬಿಂಬಿತವಾಗಿದೆ. ಫಾಝಿಲ್ ಕುಟುಂಬಕ್ಕೆ ಕ್ಲೀನ್ ಚಿಟ್ ನೀಡುವಲ್ಲಿ ಉತ್ಸಾಹ ತೋರಿದ ಕಾಂಗ್ರೆಸ್ ನಾಯಕರು ಸುಹಾಸ್ ಶೆಟ್ಟಿಗೆ ರೌಡಿಶೀಟರ್ ಎಂಬ ಹಣೆಪಟ್ಟಿ ಕಟ್ಟಿ ಪ್ರಕರಣದ ಸೈದ್ಧಾಂತಿಕ ವಾಸ್ತವಿಕ ತೆಯನ್ನು ಮರೆಮಾಚುವ ಪ್ರಯತ್ನ ನಡೆಸಿದರು. ಇದು ದ.ಕ ಮತ್ತು ಕರಾವಳಿ ಜನರ ಮೇಲೆ ಕಾಂಗ್ರೆಸ್ ಮಾಡಿರುವ ದ್ರೋಹದ ಪ್ರಕ್ರಿಯೆ ಯ ಮುಂದುವರಿದ ಭಾಗ ಎಂದು ಬಣ್ಣಿಸಿದರು.

ಆರಂಭದಲ್ಲಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ವೈಯಕ್ತಿಕ, ಬಳಿಕ ಕಮ್ಯುನಲ್ ಪ್ರಕರಣವನ್ನು ಬಿಂಬಿಸಲಾಯಿತು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ನಾಯಕರಾದ ಹರಿಕೃಷ್ಣ ಬಂಟ್ವಾಳ, ಪ್ರೇಮಾನಂದ ಶೆಟ್ಟಿ, ವಕ್ತಾರ ಅರುಣ್ ಶೇಟ್, ವಸಂತ ಪೂಜಾರಿ, ಪ್ರಶಾಂತ್ ಪಾರೆಂಕಿ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article