ಆಕ್ಷೇಪಾರ್ಹ ಪೋಸ್ಟ್ ಮಾಡಿರುವ ಶಾಸಕ ಹರೀಶ್ ಪೂಂಜಾ, ವಿಕಾಸ್ ಪಿ. ವಿರುದ್ಧ ದೂರು

ಆಕ್ಷೇಪಾರ್ಹ ಪೋಸ್ಟ್ ಮಾಡಿರುವ ಶಾಸಕ ಹರೀಶ್ ಪೂಂಜಾ, ವಿಕಾಸ್ ಪಿ. ವಿರುದ್ಧ ದೂರು


ಮಂಗಳೂರು: ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ ಮಾಡಿರುವ ಶಾಸಕ ಹರೀಶ್ ಪೂಂಜಾ, ಬಿಜೆಪಿ ಕಾರ್ಯಕರ್ತ ವಿಕಾಸ್ ಪಿ. ವಿರುದ್ಧ ಜಿಲ್ಲಾ ಕಾಂಗ್ರೆಸ್ ಪೊಲೀಸ್ ಕಮಿಷನರ್‌ಗೆ ಸೋಮವಾರ ದೂರು ನೀಡಲಾಯಿತು.

ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಪರವಾಗಿ ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್‌ಗೆ ದೂರು ನೀಡಿದರು.

‘ಶಾಸಕ ಹರೀಶ್ ಪೂಂಜಾ, ಬಿಜೆಪಿ ಕಾರ್ಯಕರ್ತ ವಿಕಾಸ್ ಪಿ. ಎಂಬವರು ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಸಮಾಜದಲ್ಲಿ ಶಾಂತಿ ಭಂಗ ಉಂಟು ಮಾಡುವ ಉದ್ದೇಶದಿಂದ ಕೋಮು ಗಲಭೆಗೆ ಪ್ರಚೋದನೆಗೆ ನೀಡಿದ್ದಾರೆ. ಈ ಬಗ್ಗೆ ಗಂಭೀರವಾಗಿ ಪರಿಗಣಿಸಿ ಇಬ್ಬರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುಬೇಕು’ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಈ ಸಂದರ್ಭ ಮ್ಯಾಕ್ವಿನ್, ರೋನ್ಸ್ಟನ್, ಕೇವಿನ್, ವೆರ್ ನೊನ್ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article