
ಮೆಸ್ಕಾಂನಿಂದ ಮಳೆಗಾಲದ ಮುನ್ನೆಚರಿಕೆ ಕ್ರಮಕ್ಕೆ ಸೂಚನೆ
ಮಂಗಳೂರು: ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪೆನಿಯು ಗ್ರಾಹಕರಿಗೆ ಉತ್ತಮ ಗುಣಮಟ್ಟದ ವಿದ್ಯುತ್ನ್ನು ಯೋಗ್ಯ ರೀತಿಯಲ್ಲಿ ಒದಗಿಸಲು ಹಲವಾರು ಯೋಜನೆಗಳನ್ನು ಕಾಲನುಕಾಲಕ್ಕೆ ಕಾರ್ಯಗತಗೊಳಿಸಿದೆ.
ಸಾರ್ವಜನಿಕರು ತುಂಡಾಗಿ ಬಿದ್ದಿರುವ ವಿದ್ಯುತ್ ಲೈನ್ಗಳಳನ್ನು ಮುಟ್ಟುವುದಾಗಲಿ, ವಿದ್ಯುತ್ ಕಂಬ ಹಾಗೂ ಇತರೆ ವಿದ್ಯುತ್ ಉಪಕರಣಗಳನ್ನು ಮುಟ್ಟುವುದಾಗಲೀ, ಜಾನುವಾರುಗಳನ್ನು ವಿದ್ಯುತ್ ಕಂಬಕ್ಕೆ ಕಟ್ಟುವುದಾಗಲೀ, ಬಟ್ಟೆ ಒಣಗಲು ವಿದ್ಯುತ್ ಕಂಪೆನಿಯ ಸಾಮಾಗ್ರಿಗಳನ್ನು ಬಳಸುವುದಾಗಲೀ ಮಾಡಬಾರದೆಂದು ಈ ಮೂಲಕ ಕೋರಿದೆ, ವಿದ್ಯುತ್ನ ಅವಘಡದ ಬಗ್ಗೆ ಮುನ್ಸೂಚನೆ ಕಂಡು ಬಂದಲ್ಲಿ ತಕ್ಷಣ 24*7 ಗ್ರಾಹಕ ಸೇವಾ ಕೇಂದ್ರದ ಸಂಖ್ಯೆ ‘1912’ಗೆ ದೂರನ್ನು ದಾಖಲಿಸಿ ಅಥವಾ ಗ್ರಾಹಕ ಸೇವಾ ಕೇಂದ್ರದ ತಿhಚಿಣsಚಿಠಿಠಿ ನಂಬರ್ 9483041912 ಗೆ ಸಂದೇಶವನ್ನು ಕಳುಹಿಸಿ ಅಥವಾ ‘ನನ್ನ ಮೆಸ್ಕಾಂ’ ಂಠಿಠಿ ನ ಮುಖಾಂತರ ಮಾಹಿತಿ ನೀಡಬಹುದಾಗಿದೆ.
ಕಾರ್ಕಳ ವಿಭಾಗದ ವ್ಯಾಪ್ತಿಯಲ್ಲಿ ಅತೀ ತುರ್ತು ಸಂದರ್ಭದಲ್ಲಿ ಈ ಕೆಳಕಂಡ ಉಪವಿಭಾಗಗಳ ೨೪*೭ ಸೇವಾ ಕೇಂದ್ರಗಳ ದೂರನ್ನು ದಾಖಲಿಸಿ ಸಮಸ್ಯೆಯನ್ನು ಪರಿಹರಿಸಲು ಸಂಪರ್ಕಿಸಬಹುದಾಗಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.