ಕಾಂಗ್ರೆಸ್‌ಗೆ ಅಲ್ಪಸಂಖ್ಯಾತರ ರಾಜೀನಾಮೆಗೆ ಚಿಂತನೆ

ಕಾಂಗ್ರೆಸ್‌ಗೆ ಅಲ್ಪಸಂಖ್ಯಾತರ ರಾಜೀನಾಮೆಗೆ ಚಿಂತನೆ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಮುಸ್ಲಿಮರ ಮೇಲೆ ನಡೆಯುತ್ತಿರುವ ದೌರ್ಜನ್ಯ ಮತ್ತು ರಾಜ್ಯ ಗೃಹ ಇಲಾಖೆಯ ವೈಫಲ್ಯವನ್ನು ಖಂಡಿಸಿ ಮುಂದಿನ ನಿರ್ಧಾರದ ಬಗ್ಗೆ ಚರ್ಚಿಸಲು ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕವು ಮೇ 29ರಂದು ಅಪರಾಹ್ನ 2.30ಕ್ಕೆ ನಗರದ ಬೋಳಾರ ಶಾದಿಮಹಲ್‌ನ ಸಭಾಂಗಣದಲ್ಲಿ ಸಭೆ ಕರೆದಿದೆ.

ಜಿಲ್ಲೆಯಲ್ಲಿ ಸರಣಿ ಕೊಲೆಗಳು ನಡೆಯುತ್ತಿವೆ. ಇದನ್ನು ತಡೆಯುವಲ್ಲಿ ಗೃಹ ಇಲಾಖೆಯ ವೈಫಲ್ಯ ಮತ್ತು ಮುಸ್ಲಿಮರ ಕಡೆಗಣನೆ ಬೇಸತ್ತು ಕಾಂಗ್ರೆಸ್ ಪಕ್ಷದ ಬೂತ್ ಮಟ್ಟದಿಂದ ಹಿಡಿದು ರಾಜ್ಯ ಘಟಕದವರೆಗಿನ ವಿವಿಧ ಹುದ್ದೆಯಲ್ಲಿರುವ ಮುಸ್ಲಿಮ್ ಮುಖಂಡರು ಮತ್ತು ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ಪ್ರಕಟಿಸುವ ನಿಟ್ಟಿನಲ್ಲಿ ಈ ಸಭೆ ಕರೆಯಲಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್.ಮುಹಮ್ಮದ್ ಮತ್ತು ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಕೆ. ಶಾಹುಲ್ ಹಮೀದ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರಾಜೀನಾಮೆ...

"ರಾಜ್ಯ ಕಾಂಗ್ರೆಸ್ ಸರಕಾರವು ಕರಾವಳಿಯಲ್ಲಿ ಕೋಮುವಾದಿಗಳನ್ನು ನಿಯಂತ್ರಿಸುವಲ್ಲಿ ಸರಕಾರ ವಿಫಲವಾಗಿದೆ. ಈ ಕಾರಣಕ್ಕೆ ಬೇಸತ್ತು ಉಳ್ಳಾಲ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸುತ್ತಿದ್ದೇನೆ" ಎಂದು ಮುಹಮ್ಮದ್ ಶಮೀರ್ ತಿಳಿಸಿದ್ದಾರೆ.

ಎರಡು ವರ್ಷಗಳಿಂದ ಅಧಿಕಾರದಲ್ಲಿರುವ ರಾಜ್ಯ ಕಾಂಗ್ರೆಸ್ ಸರಕಾರವು ಕರಾವಳಿಯಲ್ಲಿ ಕೋಮುವಾದಿಗಳ ಹೆಡೆಮುರಿ ಕಟ್ಟಿಹಾಕಲು ಯಾವುದೇ ಪರಿಣಾಮಕಾರಿ ಕ್ರಮಗಳನ್ನು ಕೈಗೊಂಡಿಲ್ಲ. ಇದೇ ಕಾರಣಕ್ಕೆ ಬಂಟ್ವಾಳದ ಕೊಳತ್ತಮಜಲಿನಲ್ಲಿ ನಡೆದ ಅಮಾಯಕ ಯುವಕ ಅಬ್ದುಲ್ ರಹ್ಮಾನ್ ರ ಕೊಲೆಯಂತಹ ದುಷ್ಕೃತ್ಯಗಳು ಇಲ್ಲಿ ಮರುಕಳಿಸುತ್ತಿವೆ. ಕಾಂಗ್ರೆಸ್ ಸರಕಾರದ ಬೇಜವಾಬ್ದಾರಿತನ ಮತ್ತು ನಿಷ್ಕ್ರಿಯತೆಯಿಂದಾಗಿ ಇವು ಸಂಭವಿಸುತ್ತಿವೆ ಎಂದವರು ಆರೋಪಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article