
ದ್ವೇಷ ಹಬ್ಬಿಸುವ ಮತ್ತು ಪ್ರಚೋದನಕಾರಿ ಬರಹಗಳ ಪೋಸ್ಟ್: ಪ್ರಕರಣ ದಾಖಲು
Saturday, May 3, 2025
ಮಂಗಳೂರು: ಹಿಂದು ಸಂಘಟನೆ ಕಾರ್ಯಕರ್ತ, ರೌಡಿ ಶೀಟರ್ ಸುಹಾಸ್ ಶೆಟ್ಟಿ ಕೊಲೆ ಘಟನೆ ಹಿನ್ನೆಲೆಯಲ್ಲಿ ಹಿಂದು ಮತ್ತು ಮುಸ್ಲಿಮರು ಜಾಲತಾಣದಲ್ಲಿ ಪರಸ್ಪರ ದ್ವೇಷ ಹಬ್ಬಿಸುವ ಮತ್ತು ಪ್ರಚೋದನಕಾರಿ ಬರಹಗಳನ್ನು ಪೋಸ್ಟ್ ಮಾಡಿದ್ದು, ಈ ಬಗ್ಗೆ ಮಂಗಳೂರು ಪೊಲೀಸರು 12ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿದ್ದಾರೆ.
ಶಾಂತಿ, ಸೌಹಾರ್ದಕ್ಕೆ ಧಕ್ಕೆ ಬರುವ ರೀತಿ ಒಂದು ಸಮುದಾಯವನ್ನು ಇನ್ನೊಂದು ಸಮುದಾಯದ ಎದುರು ಎತ್ತಿ ಕಟ್ಟುವ ರೀತಿ ಪೋಸ್ಟ್ ಹಾಕಿದ್ದಾರೆ.