
ಆರೋಪಿಗಳ ಮಾಹಿತಿ ಲಭ್ಯ: ಎಡಿಜಿಪಿ ಆರ್. ಹಿತೇಂದ್ರ
Friday, May 2, 2025
ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂದಿಸಿದಂತೆ ಆರೋಪಿಗಳ ಮಾಹಿತಿ ನಮಗೆ ಲಭ್ಯವಾಗಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್. ಹಿತೇಂದ್ರ ತಿಳಿಸಿದ್ದಾರೆ.
ಘಟನೆಯ ಹಿನ್ನೆಲೆಯಲ್ಲಿ ನಗರಕ್ಕೆ ಇಂದು ಆಗಮಿಸಿದ ಅವರು, ಮಾಧ್ಯಮಗಳ ಜೊತೆ ಮಾತನಾಡಿ, ಸುಹಾಸ್ ಹತ್ಯೆ ಹಿನ್ನೆಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ನಾವು ಭದ್ರತೆಗೆ ಸೂಕ್ತ ವ್ಯವಸ್ಥೆಗಳನ್ನು ಮಾಡಿದ್ದೇವೆ. ಸುಹಾಸ್ ಮೃತದೇಹದ ಮರಣೋತ್ತರ ಪರೀಕ್ಷೆ ನಡೆದಿದೆ. ಜನತೆ ಯಾವುದೇ ವದಂತಿಗಳಿಗೆ ಕಿವಿಗೊಡದೆ ಶಾಂತರೀತಿಯಿಂದ ವರ್ತಿಸಬೇಕು ಎಂದು ಮನವಿ ಮಾಡಿದ್ದಾರೆ.
ಸುಹಾಸ್ ಶೆಟ್ಟಿ ಹತ್ಯೆ ಆರೋಪಿಗಳ ಗುರುತು ಸಿಕ್ಕಿದ್ದು ಅವರನ್ನು ವಶಕ್ಕೆ ಪಡೆಯಲು ನಮ್ಮ ಪೊಲೀಸ್ ತಂಡ ಕೆಲಸ ಮಾಡುತ್ತಿದೆ ಎಂದರು.