ಕರ್ತವ್ಯ ನಿರತ ಪೊಲೀಸ್ ಪೇದೆಗೆ ಹಲ್ಲೆ

ಕರ್ತವ್ಯ ನಿರತ ಪೊಲೀಸ್ ಪೇದೆಗೆ ಹಲ್ಲೆ

ಉಡುಪಿ: ಕರ್ತವ್ಯ ನಿರ್ವಹಿಸುತ್ತಿದ್ದ ಉಡುಪಿ ಸಂಚಾರ ಪೊಲೀಸ್ ಠಾಣೆ ಸಿಬ್ಬಂದಿಗೆ ವಕೀಲನೋರ್ವ ಧಮ್ಕಿ ಹಾಕಿ, ಅವಾಚ್ಯವಾಗಿ ನಿಂದಿಸಿ ಹಲ್ಲೆ ಮಾಡಿರುವ ಘಟನೆ ಕರಾವಳಿ ಜಂಕ್ಷನ್ ಫ್ಲೈಓವರ್ ಬಳಿ ಭಾನುವಾರ ನಡೆದಿದೆ.

ಫ್ಲೈಓವರ್ ಬಳಿ ಯಾವಾಗಲೂ ವಾಹನ ಸಂಚಾರ ದಟ್ಟಣೆ ಇರುವುದರಿಂದ ಉಡುಪಿ ಸಂಚಾರ ಠಾಣೆಯ ಪೊಲೀಸ್ ಕಾನ್ಸ್‌ಟೇಬಲ್ ದುಂಡಪ್ಪ ಮಾಧವ ಎಂಬವರು ಅಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರು ಬನ್ನಂಜೆ ಕಡೆಯಿಂದ ಬರುತ್ತಿದ್ದ ವಾಹನವನ್ನು ಹ್ಯಾಂಡ್ ಸಿಗ್ನಲ್ ಮಾಡಿ ನಿಲ್ಲಿಸುತ್ತಿದ್ದರು.

ಆ ಸಂದರ್ಭ ಸ್ಕೂಟರ್ ಸವಾರ ಕೆ. ರಾಜೇಂದ್ರ ಎಂಬಾತ ಯಾಕೆ ವಾಹನವನ್ನು ತಡೆದಿರಿ? ನಾನು ಅಡ್ವೋಕೇಟ್. ನೀನು ಎಲ್ಲಿಂದಲೋ ಬಂದು ಇಲ್ಲಿ ಕರ್ತವ್ಯ ನಿರ್ವಹಿಸುವ ಅವಶ್ಯಕತೆ ಇಲ್ಲ. ನಮ್ಮ ಜಿಲ್ಲೆಯನ್ನು ನಾವೇ ನೋಡಿಕೊಳ್ಳುತ್ತೇವೆ ಎಂದು ಏಕವಚನದಲ್ಲಿ ಬೈದು ಅಲ್ಲದೆ, ಹಲ್ಲೆ ಮಾಡಿರುವುದಾಗಿ ದುಂಡಪ್ಪ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article