ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಸೂಚನೆ

ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಸೂಚನೆ


ಉಡುಪಿ: ಭಾರಿ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಜೊತೆಗೆ ಎಚ್ಚರಿಕೆಯಿಂದ ಇರುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಜಿಲ್ಲೆಯಾದ್ಯಂತ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಮುಂದಿನ ಮೂರು ದಿನ ಕೂಡ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಪ್ರವಾಸಿ ತಾಣಗಳು, ಸಮುದ್ರ-ನದಿ ಪಾತ್ರಗಳಲ್ಲಿ ಸಾಕಷ್ಟು ಮುನ್ನೆಚ್ಚರಿಕೆ ವಹಿಸಬೇಕು. ಅಪಾಯಕಾರಿ ಸ್ಥಳಗಳಲ್ಲಿ ಪ್ರವಾಸಿಗರಿಗೆ ನಿಷೇಧ ಹೇರಬೇಕು ಎಂದು ಸಚಿವರು ತಿಳಿಸಿದ್ದಾರೆ.

ಸಮುದ್ರ ಹಾಗೂ ನದಿ ತಟದಲ್ಲಿ ವಾಸಿಸುತ್ತಿರುವ ಜನರನ್ನು ಅಗತ್ಯಬಿದ್ದರೆ ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳಾಂತರಿಸಬೇಕು. ಜನರ ಅನುಕೂಲಕ್ಕಾಗಿ ಕಾಳಜಿ ಕೇಂದ್ರಗಳನ್ನು ತೆಗೆಯಬೇಕು. ಏಳು ತಾಲೂಕಿನ ಜನರ ಅನುಕೂಲಕ್ಕಾಗಿ ದಿನದ 24 ಗಂಟೆ ಸಹಾಯವಾಣಿ ಕಾರ್ಯನಿರ್ವಹಿಸಬೇಕು ಎಂದು ಸಚಿವೆ ಹೆಬ್ಬಾಳ್ಕರ್ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article