
ಅಪರೇಷನ್ ಸಿಂದೂರ ಮೂಲಕ ಅಮಾಯಕ ಹಿಂದೂಗಳ ಪ್ರತಿ ಹನಿ ರಕ್ತಕ್ಕೂ ನ್ಯಾಯ: ಯಶಪಾಲ್ ಸುವರ್ಣ
ಉಡುಪಿ: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ’ಆಪರೇಷನ್ ಸಿಂದೂರ’ ಮೂಲಕ ಪಾಕಿಸ್ತಾನದೊಳಗೆ ನುಗ್ಗಿ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದೆ. ಲಷ್ಕರೆ ತೊಯ್ಬಾ ಮತ್ತು ಜೈಶೆ ಮೊಹಮ್ಮದ್ ಸಂಘಟನೆಗಳ 9 ನೆಲೆಗಳನ್ನು ಧ್ವಂಸಗೊಳಿಸಿ, ನೂರಾರು ಮತಾಂಧ ಉಗ್ರರ ಮಾರಣಹೋಮ ನಡೆಸಿ ಉಗ್ರವಾದವನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂಬ ದಿಟ್ಟ ಸಂದೇಶವನ್ನು ಜಗತ್ತಿಗೆ ಸಾರುವ ಮೂಲಕ ಭಯೋತ್ಪಾದಕರ ಗುಂಡಿಗೆ ಬಲಿಯಾದ ಅಮಾಯಕ ಹಿಂದೂಗಳ ಪ್ರತೀ ಹನಿ ರಕ್ತಕ್ಕೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ನ್ಯಾಯ ಒದಗಿಸಿದೆ ಎಂದು ಉಡುಪಿ ಶಾಸಕ ಯಶಪಾಲ್ ಸುವರ್ಣ ಹೇಳಿದ್ದಾರೆ.
26 ಮಂದಿ ಅಮಾಯಕರನ್ನು ಬಲಿ ಪಡೆದ ಉಗ್ರರನ್ನು ಪಾಕಿಸ್ತಾನದ ಒಳಗಡೆ ಹೋಗಿ ಭಾರತೀಯ ಸೇನೆ ಹೊಡೆದುರುಳಿಸಿದೆ. ಯುದ್ಧದ ಉದ್ವಿಗ್ನತೆಯ ನಡುವೆಯೇ ಪಾಕ್ ವಿರುದ್ಧ ಭಾರತ ಸೇಡು
ತೀರಿಸಿಕೊಂಡಿದ್ದು, ಪಾಕ್ ಹಾಗೂ ಪಿಒಕೆಯ 9 ಉಗ್ರರ ನೆಲೆಗಳ ಮೇಲೆ ಏರ್ಸ್ಟ್ರೈಕ್ ನಡೆಸಿರುವ ಭಾರತ, ಉಗ್ರರ ಹುಟ್ಟಡಗಿಸಿ ಪಹಲ್ಗಾಮ್ ದಾಳಿಗೆ ಆಪರೇಷನ್ ಸಿಂದೂರ ಮೂಲಕ ಭಾರತ ಪ್ರತೀಕಾರ ತೀರಿಸಿಕೊಂಡಿದೆ.
ಭಾರತೀಯ ಹಿಂದೂ ಹೆಣ್ಣುಮಕ್ಕಳ ಸಿಂದೂರ (ಕುಂಕುಮ)ವನ್ನು ಅಳಿಸಿದವರ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಸರ್ಕಾರ ‘ಆಪರೇಷನ್ ಸಿಂದೂರ’ ಎಂದು ಕಾರ್ಯಾಚರಣೆಗೆ ನಾಮಕರಣ ಮಾಡಿ ಅತ್ಯಂತ ಯಶಸ್ವಿಯಾಗಿ ಅತ್ಯಂತ ಕ್ಷಿಪ್ರ ಹಾಗೂ ಪರಾಕ್ರಮ ಮೆರೆದು ಉಗ್ರರ ವಿರುದ್ಧ ಕಾರ್ಯಾಚರಣೆ ಮಾಡಿದ ಭಾರತೀಯ ಸೇನೆಯ ರಕ್ಷಣಾ ಸಲಹೆಗಾರ ಅಜಿತ್ ಧೋವಲ್, ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಎ.ಪಿ. ಸಿಂಗ್, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ. ತ್ರಿಪಾಠಿ ಹಾಗೂ ಯಶಸ್ವಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿ ಪರಾಕ್ರಮ ಮೆರೆದ ವೀರ ಸೈನಿಕರಿಗೆ ದೇಶದ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ಶಾಸಕ ಯಶಪಾಲ್ ತಿಳಿಸಿದ್ದಾರೆ.
ದೇಶದ ಜನತೆ ನರೇಂದ್ರ ಮೋದಿ ಸರ್ಕಾರದ ಮೇಲೆ ಭರವಸೆ ಇಟ್ಟು ಮತದಾನ ಮಾಡಿದ ಪ್ರತಿಯೋರ್ವ ಭಾರತೀಯನ ಮತಕ್ಕೆ ಇಂದು ಗೌರವ ಸಲ್ಲಿಸುವ ಕೆಲಸವನ್ನು ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ ಸಿಂಗ್ ಹಾಗೂ ಸಚಿವ ಸಂಪುಟದ ಸಚಿವರು ಮಾಡಿದ್ದಾರೆ ಎಂದವರು ತಿಳಿಸಿದ್ದಾರೆ.