
ಹೊಟೇಲ್ ಕಾರ್ಮಿಕನಿಗೆ ಹಲ್ಲೆ: ಆರೋಪಿಗಳ ಬಂಧನ
Monday, May 5, 2025
ಉಳ್ಳಾಲ: ಪೊಲೀಸ್ ಠಾಣಾ ವ್ಯಾಪ್ತಿಯ ಕುಂಪಲ ಬಗಂಬಿಲ ಬಳಿ ಶನಿವಾರ ರಾತ್ರಿ ವ್ಯಕ್ತಿಯ ಮೇಲೆ ತಂಡವೊಂದು ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕು ಮಂದಿ ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಆದಿತ್ಯ ಕುಷಿತ್, ಮೈಕಲ್, ಸಚಿನ್ ಎಂದು ಗುರುತಿಸಲಾಗಿದೆ.
ಇವರು ಬಗಂಬಿಲ ಬಳಿ ಹೊಟೇಲ್ ಕಾರ್ಮಿಕ ಅಝೀಝ್ ಅವರ ಮೇಲೆ ಹಲ್ಲೆಗೈದಿದ್ದರು ಎನ್ನಲಾಗಿದೆ. ಈ ಬಗ್ಗೆ ಅಝೀಝ್ ನೀಡಿದ ದೂರಿನ ಮೇರೆಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೆತ್ತಿಕೊಂಡ ಉಳ್ಳಾಲ ಠಾಣಾಧಿಕಾರಿ ವಿರೂಪಾಕ್ಷ ಸ್ವಾಮಿ ನೇತೃತ್ವದ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ ದುಷ್ಕರ್ಮಿಗಳನ್ನು ಬಂಧಿಸಿದ್ದಾರೆ.