ರಹೀಂ ಹತ್ಯೆ: 8 ಮಂದಿ ಆರೋಪಿಗಳಿಗೆ ನ್ಯಾಯಾಂಗ ಬಂಧನ

ರಹೀಂ ಹತ್ಯೆ: 8 ಮಂದಿ ಆರೋಪಿಗಳಿಗೆ ನ್ಯಾಯಾಂಗ ಬಂಧನ


ಬಂಟ್ವಾಳ: ಇಲ್ಲಿನ ಇರಾಕೋಡಿಯಲ್ಲಿ ನಡೆದ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ 8 ಮಂದಿ ಆರೋಪಿಯನ್ನು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಎಲ್ಲಾ ಆರೋಪಿಗಳಿಗೂ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೀಪಕ್ (21), ಪೃಥ್ವಿರಾಜ್ (21), ಚಿಂತನ್ (19), ಸುಮಿತ್ ಆಚಾರ್ಯ (27), ಅಭಿನ್ ರೈ (32)  ತೇಜಾಕ್ಷ (24), ರವಿರಾಜ್ (23) ಹಾಗೂ ರವಿ ಸಂಜಯ್ (29) ಎಂಬುವರನ್ನು ಪೊಲೀಸರು ಬಂಧಿಸಿದ್ದರು. ಕೃತ್ಯಕ್ಕೆ ಬಳಸಲಾದ ತಲವಾರು, ಎರಡು ದ್ವಿಚಕ್ರ ವಾಹನವನ್ನು ವಶಪಡಿಸಿದ್ದರು.

ಇದಕ್ಕು ಮೊದಲು ಆರೋಪಿಗಳೆಲ್ಲರನ್ನು ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯ ಜೂ.9 ರವರೆಗೆ ಪೊಲೀಸ್ ಕಸ್ಟಡಿಗೊಪ್ಪಿಸಿತ್ತು. ಇದೀಗ ವಿಚಾರಣೆ ಪೂರ್ಣಗೊಂಡಿರುವ ಹಿನ್ನಲೆಯಲ್ಲಿ ಸೋಮವಾರ ಸಂಜೆ ಬಂಧಿತ 8 ಮಂದಿ ಆರೋಪಿಗಳನ್ನು ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.

ಅಬ್ದುಲ್ ರಹಿಮಾನ್ ಹತ್ಯಾ ಪ್ರಕರಣದಲ್ಲಿ ಒಟ್ಟು 15 ಮಂದಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ 8 ಮಂದಿಯನ್ನು ಬಂಧಿಸಲಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸರಿಂದ ತನಿಖೆ ಮುಂದುವರಿದಿದೆ. ಜಿಲ್ಲಾ ಎಸ್ಪಿ ಡಾ. ಅರುಣ್ ಅವರು ಬಂಟ್ವಾಳ ಗ್ರಾಮಾಂತರ ಠಾಣೆಗಾಗಮಿಸಿ ತನಿಖೆಗೆ ಮಾರ್ಗದರ್ಶನ ನೀಡಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article