
ಕುಂಜಾಲು-ದನದ ರುಂಡ ಪತ್ತೆ: ಜನರಲ್ಲಿ ಆತಂಕ
Sunday, June 29, 2025
ಕುಂದಾಪುರ: ಬ್ರಹ್ಮಾವರ ತಾಲೂಕಿನ ಕುಂಜಾಲು ಬಸ್ ನಿಲ್ದಾಣದ ಸಮೀಪ ದನದ ರುಂಡ ಪತ್ತೆಯಾಗಿದ್ದು ಜನರಲ್ಲಿ ಆತಂಕ ಮೂಡಿಸಿದೆ.
ಶನಿವಾರ ತಡ ರಾತ್ರಿ ಈ ಘಟನೆ ಸಂಭವಿಸಿದ್ದು, ದನದ ತಲೆಯನ್ನು ದುಷ್ಕರ್ಮಿಗಳು ರಸ್ತೆಯಲ್ಲೇ ಎಸೆದು ಹೋಗಿದ್ದಾರೆ.
ಘಟನೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಈ ಪ್ರದೇಶದಲ್ಲಿ ಅಕ್ರಮ ಕಸಾಯಿಖಾನೆ ನಡೆಯುತ್ತಿರುವ ಬಗ್ಗೆ ಸಂಶಯ ಮೂಡಿದೆ. ತಪ್ಪಿತಸ್ಥರ ಪತ್ತೆಗೆ ಹಿಂದೂ ಸಂಘಟನೆಗಳು ಪಟ್ಟು ಹಿಡಿದಿದ್ದಾರೆ.
ಪ್ರಕರಣದ ಬಗ್ಗೆ ಬ್ರಹ್ಮಾವರ ಪೊಲೀಸರು ತನಿಖೆ ನಡೆಸುತ್ತಿದ್ದು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.